Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಉತ್ತಮ ಸಂಸ್ಕಾರ ಅಥವಾ ಗುಣಗಳನ್ನು ಹೊಂದಿರುವ ಬ್ರಾಹ್ಮಣ ಗಂಡಸರು ಎಂದು ಹೇಳಿದ್ದ ಸಿ.ಕೆ.ರೌಲ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೋದ್ರಾ ಕ್ಷೇತ್ರದಿಂದ ಸಿ.ಕೆ.ರೌಲ್ಜಿ ಅವರನ್ನು ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರ್ಚ್ 3, 2002ರಂದು ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಆ ಸಮಯದಲ್ಲಿ 19 ವರ್ಷದವರಾಗಿದ್ದ ಬಿಲ್ಕಿಸ್‌ ಗರ್ಭಿಣಿಯಾಗಿದ್ದರು. ಬಿಲ್ಕಿಸ್‌ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಸದಸ್ಯರನ್ನು ಅಹಮದಾಬಾದ್ ಬಳಿ ಗಲಭೆಕೋರರು ಹತ್ಯೆ ಮಾಡಿದ್ದರು. ಒಬ್ಬ ವ್ಯಕ್ತಿಯಂತೂ ತನ್ನ ತಾಯಿಯ ತೋಳುಗಳಿಂದ ಮಗುವನ್ನು ಕಿತ್ತುಕೊಂಡು ಆ ಮಗುವಿನ ತಲೆಯನ್ನು ಬಂಡೆಯ ಮೇಲೆ ಬಡಿದಿದ್ದನು. ಇಂಥವರನ್ನು ಸಂಸ್ಕಾರಿ ಬ್ರಾಹ್ಮಣರೆಂದು ಕರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿತ್ತು. ಸನ್ನಡತೆಯ ನೀತಿಯ ಅಡಿಯಲ್ಲಿ ಅಪರಾಧಿಗಳ ಅರ್ಜಿಯನ್ನು ಅನುಮೋದಿಸಿದ ನಂತರ ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತ್ತು.

ಗೋಧ್ರಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ರೌಲ್ಜಿ ಕಳೆದ ಆಗಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಬಿಲ್ಕಿಸ್‌ ಪ್ರಕರಣದ ಅಪರಾಧಿಗಳು ಒಳ್ಳೆಯವರು ಎಂದು ತಿಳಿಸಿದ್ದರು.

“ಅವರು ಅಪರಾಧ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ನನಗೆ ತಿಳಿದಿಲ್ಲ…” ಎಂದು ರೌಲ್ಜಿ ಸಂದರ್ಶನವೊಂದರಲ್ಲಿ ಹೇಳಿದ್ದರು. “ಜೈಲಿನಲ್ಲಿ ಅವರ ನಡತೆ ಚೆನ್ನಾಗಿತ್ತು, ಅವರು ಬ್ರಾಹ್ಮಣರು… ಉತ್ತಮ ಸಂಸ್ಕಾರ [ಮೌಲ್ಯಗಳು] ಹೊಂದಿದವರು” ಎಂದು ಶ್ಲಾಘಿಸಿದ್ದರು.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅಡಿಯಲ್ಲಿ ಗುಜರಾತ್ ಸರ್ಕಾರ ರಚಿಸಿದ್ದ ಗೋಧ್ರಾ ಜೈಲು ಸಲಹಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಕೋಮುಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಹೆಚ್ಚಾಗಿ ಗುರಿಯಾಗಿಸಲಾಗುತ್ತದೆ ಎಂದು ಸಮಿತಿಯ ಭಾಗವಾಗಿದ್ದ ರೌಲ್ಜಿ ಹೇಳಿದ್ದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯೊಂದಿಗೆ ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...