Homeಕರ್ನಾಟಕಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ದ ವಾಗ್ದಾಳಿ: ಬಂಡಾಯದ ಸುಳಿವು

ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ದ ವಾಗ್ದಾಳಿ: ಬಂಡಾಯದ ಸುಳಿವು

- Advertisement -
- Advertisement -

ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಸಿಡಿದೆದ್ದಿದ್ದಾರೆ. “ನನ್ನ ಮಗನಿಗೆ ಟಿಕೆಟ್ ತಪ್ಪಿಸಿದ್ದು ಯಡಿಯೂರಪ್ಪ” ಎಂದು ನೇರವಾಗಿ ಹೇಳಿದ್ದಾರೆ.

ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಆದರೆ, ನನ್ನ ಮಗ ಕಾಂತೇಶ್‌ಗೆ ಅನ್ಯಾಯ ಮಾಡಿದ್ರು” ಎಂದಿದ್ದಾರೆ.

“ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕಿದೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಬಿಟ್ಟು ಬೇರೆ ಲಿಂಗಾಯತ ನಾಯಕರು ರಾಜ್ಯದಲ್ಲಿ ಇಲ್ವಾ? ಪಕ್ಷದ ಚುನಾವಣಾ ಸಮಿತಿಯ ಸಭೆಯಲ್ಲಿ ಹಾವೇರಿ ಟಿಕೆಟ್ ಕಾಂತೇಶ್‌ಗೆ ಕೊಡಿ ಎಂದು ಸ್ವತಃ ಬೊಮ್ಮಾಯಿ ಅವರೇ ಹೇಳಿದ್ದರು. ಆದರೂ, ಯಡಿಯೂರಪ್ಪ ಹಠ ಹಿಡಿದು ಅವರಿಗೇ ಯಾಕೆ ಟಿಕೆಟ್ ಕೊಡಿಸಿದ್ದು ಯಾಕೆ?” ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.

“ನಾನು 40 ವರ್ಷಗಳಿಂದ ಈ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನನಗೆ ಮಾತ್ರವಲ್ಲದೆ, ಪ್ರತಾಪ್ ಸಿಂಹ, ಸಿ.ಟಿ ರವಿ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡರಂತಹ ಪಕ್ಷದ ನಾಯಕರಿಗೆ ಅನ್ಯಾಯವಾಗಿದೆ. ಬಿಎಸ್‌ವೈ ಪಕ್ಷದ ಕತ್ತು ಹಿಸುಕಿದ್ದಾರೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಭೆ ಬಳಿಕ ತೀರ್ಮಾನ :

“ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಒಂದು ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸುವಂತೆ ನಾನು ವಿನಂತಿ ಮಾಡುತ್ತೇನೆ. ಸ್ವತಂತ್ರವಾಗಿ ನಿಲ್ಲಿ, ಆಗ ಕೇಂದ್ರದ ನಾಯಕರಿಗೆ ನಿಮ್ಮ ಬೆಲೆ ಅರ್ಥವಾಗುತ್ತದೆ ಎಂದು ನನ್ನ ಅಭಿಮಾನಿಗಳು, ಹಿತೈಷಿಗಳು ಒತ್ತಾಯಿಸುತ್ತಿದ್ದಾರೆ. ಬೆಂಬಲಿಗರ ಸಭೆ ಬಳಿಕ ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ. ಅಭಿಮಾನಿಗಳು ಹೇಳಿದಂತೆ ನಾನು ಮುಂದುವರೆಯುತ್ತೇನೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.

9 ಹಾಲಿ ಸಂಸದರಿಗೆ ಟಿಕೆಟ್ ಮಿಸ್ :

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ (ಮಾ.13) ಸಂಜೆ ಪ್ರಕಟಗೊಂಡಿದೆ. ಒಟ್ಟು 72 ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಈ ಬಾರಿ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಈ ಪೈಕಿ ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡ ಸೇರಿದಂತೆ ಪ್ರಮುಖರು ಇದ್ದಾರೆ. ಇನ್ನು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸಿ.ಟಿ ರವಿ ಮತ್ತು ಹಾವೇರಿ-ಗದಗ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ನಿರಾಸೆಯಾಗಿದೆ.

ಗಮನಾರ್ಹವಾಗಿ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ಮೈಸೂರು ರಾಜ ಕುಟುಂಬದ ಉತ್ತರಾಧಿಕಾರಿ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರದಿಂದ ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ: ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಸೇರಿ ರಾಜ್ಯದ 9 ಹಾಲಿ ಸಂಸದರಿಗೆ ಕೈ ತಪ್ಪಿದ ಟಿಕೆಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...