Homeಮುಖಪುಟಕೊಪ್ಪಳ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಅಮಿತ್‌‌ ಶಾ ಹೆಸರಿನಲ್ಲಿ ವಂಚನೆ

ಕೊಪ್ಪಳ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಅಮಿತ್‌‌ ಶಾ ಹೆಸರಿನಲ್ಲಿ ವಂಚನೆ

- Advertisement -
- Advertisement -

ಬೈಂದೂರಿನ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 7 ಕೋಟಿ ವಂಚನೆ ಮಾಡಿದ ಚೈತ್ರಾ ಕುಂದಾಪುರ ಮತ್ತು ಟೀಂನ್ನು ಸಿಸಿಬಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಮತ್ತೊಂದು ಟಿಕೆಟ್‌ಗಾಗಿ ನಡೆದ ಡೀಲ್‌ ಬಹಿರಂಗವಾಗಿದೆ.

ಕೊಪ್ಪಳದ ಕನಕಗಿರಿ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪದಡಿ ಮೂವರ ವಿರುದ್ಧ ಇಲ್ಲಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ತಿಮ್ಮಾರೆಡ್ಡಿ ಎಂಬುವರು ಜುಲೈ 19ರಂದು ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ತಿಮ್ಮಾರೆಡ್ಡಿ ಪತ್ನಿ ಗಾಯತ್ರಿಗೆ ಟಿಕೆಟ್‌ ಕೊಡಿಸುವುದಾಗಿ 21ಲಕ್ಷ ರೂ.ನಗದು ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ತಿಮ್ಮಾರೆಡ್ಡಿಗೆ, ಬೆಂಗಳೂರಿನ ಜೀತು ಎಂಬಾತನ ಮೂಲಕ ದೆಹಲಿ ಮೂಲದ ವಿಶಾಲನಾಗ್ ಎಂಬವ ಪರಿಚಯವಾಗಿದ್ದ. ವಿಶಾಲನಾಗ್ ತನ್ನನ್ನು ಬಿಜೆಪಿಯ ಕೇಂದ್ರ ಚುನಾವಣಾ ಸರ್ವೆ ತಂಡದ ಮುಖಸ್ಥ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ಬಿಜೆಪಿ ಟಿಕೆಟ್ ನೀಡಲು ಅಮಿತ್ ಶಾ ಮತ್ತು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಮಗೆ ಸರ್ವೆ ಮಾಡಲು ಹೇಳಿದ್ದಾರೆ. ಸರ್ವೆಯಲ್ಲಿ ನಿಮ್ಮ ಪತ್ನಿಯ ಹೆಸರು ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನಕ್ಕೆ ತಂದು ಟಿಕೆಟ್ ಕೊಡಿಸುತ್ತೇನೆ. ಇದಕ್ಕಾಗಿ ನಮ್ಮ ಸರ್ವೆ ತಂಡಕ್ಕೆ ಹಣ ನೀಡಬೇಕು ಎಂದಿದ್ದ. ಇದರಂತೆ ಈತನ ಮತು ನಂಬಿ 21 ಲಕ್ಷ ಹಣವನ್ನು ತಿಮ್ಮಾರೆಡ್ಡಿ ನೀಡಿದ್ದರು.

ಈ ಸಂಬಂಧ ವಿಶಾಲನಾಗ್, ಗೌರವ್ ಮತ್ತು ಜೀತು ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಕುರಿತು ಮಾತನಾಡಿದ ತಿಮ್ಮಾರೆಡ್ಡಿ, ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ವಿಶಾಲನಾಗ್‍ಗೆ ಹಣವನ್ನು ನೀಡಿದ್ದೆ. ವಿಶಾಲನಾಗ್ ಟಿಕೆಟ್‌ ಕೊಡಿಸುತ್ತೇನೆಂದು ನಾಲ್ಕು ದಿನ ದೆಹಲಿಗೂ ಕರೆಸಿಕೊಂಡಿದ್ದ. ಅಂತಿಮವಾಗಿ ಟಿಕೆಟ್ ಘೋಷಣೆಯಾದಾಗ ನನ್ನ ಪತ್ನಿಯ ಹೆಸರು ಇರಲಿಲ್ಲ. ಈ ಬಗ್ಗೆ ಕೇಳಲು ಕರೆ ಮಾಡಿದರೆ ಸ್ವೀಕರಿಸಲಿಲ್ಲ. ಬಳಿಕ ಕೆಲ ದಿನ ಬಿಟ್ಟು ಹಣ ಕೊಡುತ್ತೇನೆ ಎಂದು ಹೇಳಿದ್ದಾನೆ. ಆದರೆ ಇದುವರೆಗೂ ಹಣ ನೀಡಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: Social darvinismಗೆ ನಾವು ಅವಕಾಶ ಕೊಡಬಾರದು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...