Homeಮುಖಪುಟತೃತೀಯ ರಂಗದಿಂದ ಬಿಜೆಪಿಗೆ ಲಾಭ, ಸಮಾನ ಮನಸ್ಕರು ಒಂದಾಗುವ ತುರ್ತು ಅಗತ್ಯವಿದೆ: ಕಾಂಗ್ರೆಸ್

ತೃತೀಯ ರಂಗದಿಂದ ಬಿಜೆಪಿಗೆ ಲಾಭ, ಸಮಾನ ಮನಸ್ಕರು ಒಂದಾಗುವ ತುರ್ತು ಅಗತ್ಯವಿದೆ: ಕಾಂಗ್ರೆಸ್

- Advertisement -
- Advertisement -

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು “ಸೈದ್ಧಾಂತಿಕ ಆಧಾರದ ಮೇಲೆ” ಒಂದು “ತುರ್ತು ಅಗತ್ಯವಿದೆ” ಎಂದು ವಾದಿಸಿದ ಕಾಂಗ್ರೆಸ್, “ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಜೋಡಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುವುದಾಗಿ” ಶನಿವಾರ ಹೇಳಿದೆ. ತೃತೀಯ ರಂಗದಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ರಾಯ್‌ಪುರದಲ್ಲಿ ನಡೆದ 85ನೇ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸರ್ವಸದಸ್ಯ ಸಭೆಯಲ್ಲಿ ಚರ್ಚಿಸಲಾಗುತ್ತಿರುವ ಕರಡು ರಾಜಕೀಯ ನಿರ್ಣಯದಲ್ಲಿ ತೃತೀಯ ರಂಗದ ಬಗ್ಗೆ ಪಕ್ಷದ ನಿಲುವು ಕುತೂಹಲಕಾರಿಯಾಗಿದೆ. ಬಿಜೆಪಿ-ವಿರೋಧಿ ಗುಂಪುಗಳನ್ನು ಮುನ್ನಡೆಸುವ ಕಾಂಗ್ರೆಸ್‌ನ ಕಲ್ಪನೆಯು ಕೆಲವು ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ( ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷಗಳಿಗೆ ಸಮಾಧಾನಕರವಾಗಿಲ್ಲ. ತೃತೀಯರಂಗದಿಂದ ಬಿಜೆಪಿಗೆ ಲಾಭವಾಗುತ್ತದೆ ಹಾಗಾಗಿ ಎಲ್ಲ ಸಮಾನ ಮನಸ್ಕರು ಒಂದಾಗಬೇಕು ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ, 2004 ಮತ್ತು 2014 ರ ನಡುವೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸಮ್ಮಿಶ್ರವನ್ನು ಉಲ್ಲೇಖಿಸಿದರು. ಆಗ ಹಲವು ಸಮಾನ ಮನಸ್ಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿದ್ದು, ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಅತ್ಯಂತ ಯಶಸ್ವಿ ಸರ್ಕಾರವನ್ನು ನಡೆಸಲಾಯಿತು ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲು ಸಿದ್ಧ: ಮಲ್ಲಿಕಾರ್ಜುನ ಖರ್ಗೆ

“ಇಂದು ಆ ಮೈತ್ರಿಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಬಿಜೆಪಿ ಮತ್ತು ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ವಿರುದ್ಧ ಹೋರಾಡಲು ಸಿದ್ಧವಾಗಿರುವ ಎಲ್ಲ ಪಕ್ಷಗಳೊಂದಿಗೆ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ ಎಂದು ಖರ್ಗೆ ಹೇಳಿದರು..

58 ಅಂಶಗಳ ಕರಡು ನಿರ್ಣಯವು ಪಕ್ಷದ ಕಾರ್ಯವಿಧಾನದ ಬಗ್ಗೆ ಇತರ ವಿರೋಧ ಪಕ್ಷಗಳಿಗೆ ವಿವರಿಸಿದೆ. ”ಜಾತ್ಯತೀತ ಮತ್ತು ಸಮಾಜವಾದಿ ಶಕ್ತಿಗಳ ಒಗ್ಗಟ್ಟು ಕಾಂಗ್ರೆಸ್ ಪಕ್ಷದ ಭವಿಷ್ಯದ ಲಕ್ಷಣವಾಗಲಿದೆ. ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಒಗ್ಗೂಡಿಸಲು ಕಾಂಗ್ರೆಸ್ ಎಲ್ಲ ಪ್ರಯತ್ನಗಳನ್ನು ಮಾಡಬೇಕು. ನಮ್ಮ ಸಿದ್ಧಾಂತವನ್ನು ಒಪ್ಪುವ ಜಾತ್ಯತೀತ ಪ್ರಾದೇಶಿಕ ಶಕ್ತಿಗಳನ್ನು ನಾವು ಸೇರಿಸಿಕೊಳ್ಳಬೇಕು. ಸಾಮಾನ್ಯ ಸೈದ್ಧಾಂತಿಕ ಆಧಾರದ ಮೇಲೆ ಎನ್‌ಡಿಎಯನ್ನು ಎದುರಿಸಲು ಒಗ್ಗಟ್ಟಿನ ವಿರೋಧದ ತುರ್ತು ಅಗತ್ಯವಿದೆ. ತೃತೀಯ ರಂಗದಿಂದ ಬಿಜೆಪಿಗೆ ಲಾಭವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...