Homeಮುಖಪುಟತೃತೀಯ ರಂಗದಿಂದ ಬಿಜೆಪಿಗೆ ಲಾಭ, ಸಮಾನ ಮನಸ್ಕರು ಒಂದಾಗುವ ತುರ್ತು ಅಗತ್ಯವಿದೆ: ಕಾಂಗ್ರೆಸ್

ತೃತೀಯ ರಂಗದಿಂದ ಬಿಜೆಪಿಗೆ ಲಾಭ, ಸಮಾನ ಮನಸ್ಕರು ಒಂದಾಗುವ ತುರ್ತು ಅಗತ್ಯವಿದೆ: ಕಾಂಗ್ರೆಸ್

- Advertisement -
- Advertisement -

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು “ಸೈದ್ಧಾಂತಿಕ ಆಧಾರದ ಮೇಲೆ” ಒಂದು “ತುರ್ತು ಅಗತ್ಯವಿದೆ” ಎಂದು ವಾದಿಸಿದ ಕಾಂಗ್ರೆಸ್, “ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಜೋಡಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುವುದಾಗಿ” ಶನಿವಾರ ಹೇಳಿದೆ. ತೃತೀಯ ರಂಗದಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ರಾಯ್‌ಪುರದಲ್ಲಿ ನಡೆದ 85ನೇ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸರ್ವಸದಸ್ಯ ಸಭೆಯಲ್ಲಿ ಚರ್ಚಿಸಲಾಗುತ್ತಿರುವ ಕರಡು ರಾಜಕೀಯ ನಿರ್ಣಯದಲ್ಲಿ ತೃತೀಯ ರಂಗದ ಬಗ್ಗೆ ಪಕ್ಷದ ನಿಲುವು ಕುತೂಹಲಕಾರಿಯಾಗಿದೆ. ಬಿಜೆಪಿ-ವಿರೋಧಿ ಗುಂಪುಗಳನ್ನು ಮುನ್ನಡೆಸುವ ಕಾಂಗ್ರೆಸ್‌ನ ಕಲ್ಪನೆಯು ಕೆಲವು ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ( ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷಗಳಿಗೆ ಸಮಾಧಾನಕರವಾಗಿಲ್ಲ. ತೃತೀಯರಂಗದಿಂದ ಬಿಜೆಪಿಗೆ ಲಾಭವಾಗುತ್ತದೆ ಹಾಗಾಗಿ ಎಲ್ಲ ಸಮಾನ ಮನಸ್ಕರು ಒಂದಾಗಬೇಕು ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ, 2004 ಮತ್ತು 2014 ರ ನಡುವೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸಮ್ಮಿಶ್ರವನ್ನು ಉಲ್ಲೇಖಿಸಿದರು. ಆಗ ಹಲವು ಸಮಾನ ಮನಸ್ಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿದ್ದು, ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಅತ್ಯಂತ ಯಶಸ್ವಿ ಸರ್ಕಾರವನ್ನು ನಡೆಸಲಾಯಿತು ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲು ಸಿದ್ಧ: ಮಲ್ಲಿಕಾರ್ಜುನ ಖರ್ಗೆ

“ಇಂದು ಆ ಮೈತ್ರಿಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಬಿಜೆಪಿ ಮತ್ತು ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ವಿರುದ್ಧ ಹೋರಾಡಲು ಸಿದ್ಧವಾಗಿರುವ ಎಲ್ಲ ಪಕ್ಷಗಳೊಂದಿಗೆ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ ಎಂದು ಖರ್ಗೆ ಹೇಳಿದರು..

58 ಅಂಶಗಳ ಕರಡು ನಿರ್ಣಯವು ಪಕ್ಷದ ಕಾರ್ಯವಿಧಾನದ ಬಗ್ಗೆ ಇತರ ವಿರೋಧ ಪಕ್ಷಗಳಿಗೆ ವಿವರಿಸಿದೆ. ”ಜಾತ್ಯತೀತ ಮತ್ತು ಸಮಾಜವಾದಿ ಶಕ್ತಿಗಳ ಒಗ್ಗಟ್ಟು ಕಾಂಗ್ರೆಸ್ ಪಕ್ಷದ ಭವಿಷ್ಯದ ಲಕ್ಷಣವಾಗಲಿದೆ. ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಒಗ್ಗೂಡಿಸಲು ಕಾಂಗ್ರೆಸ್ ಎಲ್ಲ ಪ್ರಯತ್ನಗಳನ್ನು ಮಾಡಬೇಕು. ನಮ್ಮ ಸಿದ್ಧಾಂತವನ್ನು ಒಪ್ಪುವ ಜಾತ್ಯತೀತ ಪ್ರಾದೇಶಿಕ ಶಕ್ತಿಗಳನ್ನು ನಾವು ಸೇರಿಸಿಕೊಳ್ಳಬೇಕು. ಸಾಮಾನ್ಯ ಸೈದ್ಧಾಂತಿಕ ಆಧಾರದ ಮೇಲೆ ಎನ್‌ಡಿಎಯನ್ನು ಎದುರಿಸಲು ಒಗ್ಗಟ್ಟಿನ ವಿರೋಧದ ತುರ್ತು ಅಗತ್ಯವಿದೆ. ತೃತೀಯ ರಂಗದಿಂದ ಬಿಜೆಪಿಗೆ ಲಾಭವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...