Homeಕರ್ನಾಟಕಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ‘ಮೀಸಲು ವಿಧಾನಸಭಾ ಕ್ಷೇತ್ರ (ಎಸ್‌.ಸಿ)ದಲ್ಲಿ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಮುಖಂಡರು ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಪಿ.ಡಬ್ಲ್ಯೂಡಿ ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ.

ʼಪುತ್ತೂರಿನ ಬಿಜೆಪಿ ಮುಖಂಡರ ಶೇಖರ್.ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಎಂಬುವವರು ಹಣ ಪಡೆದು ವಂಚನೆ ಮಾಡಿದ್ದಾರೆʼʼ ಎಂದು ಶಿವಮೂರ್ತಿಯವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ”ಹಣ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ನನ್ನ ಹಣವನ್ನು ವಾಪಸ್ಸು ಕೊಡಿಸಿ ನ್ಯಾಯ ಒದಗಿಸಬೇಕು” ಎಂದು ದೂರುದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

”ರೇವಣಸಿದ್ದಪ್ಪ ಎಂಬುವವನು ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಆ ಬಳಿಕ ಒಂದೆರಡು ಕಾರ್ಯಕ್ರಮದಲ್ಲಿ ಭೇಟಿಯಾದಾಗ, 2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸುವುದಾಗಿ 2022ರ ಅಕ್ಟೋಬರ್ 23 ರಂದು ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದಾನೆ. ಶೇಖರ್.ಎಸ್.ಪಿ. ನನ್ನ ಪರಿಚಯ ಆದ ಮೇಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಬೆಂಗಳೂರಿನ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಕಟೀಲು ಅವರು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಯಿಸಿದ್ದರು. ಆ ಬಳಿಕ ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್‌ ವಿಚಾರದ ಎಲ್ಲಾ ವ್ಯವಹಾರವನ್ನು ಶೇಖರ್ ಅವರ ಬಳಿ ಮಾತನಾಡಿ ಎಂದು ತಿಳಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಆ ನಂತರ ಶೇಖರ್.ಎನ್.ಪಿ. ಅವರು ನನ್ನ ಬಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಕೇಳುತ್ತಾರೆ, ಟಿಕೆಟ್‌ ಸಿಗದೆ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ಸು ನೀಡುತ್ತೇನೆಂದು ತಿಳಿಸುತ್ತಾರೆ. ಇದರಂತೆ 2022 ಆಕ್ಟೋಬರ್ 9ರಿಂದ ಶುರುವಾದ ಹಣದ ವ್ಯವಹಾರ ಎಪ್ರಿಲ್ 2023 ಕ್ಕೆ ರೂ.2 ಕೋಟಿ 55 ಲಕ್ಷದ ವರೆಗೂ ಹಣ ಪಡೆದುಕೊಂಡಿರುತ್ತಾರೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

”2002 ಅಕ್ಟೋಬರ್ 15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಒಬ್ಬ ವ್ಯಕ್ತಿಯನ್ನು ಕಳುಹಿಸಿ 50 ಲಕ್ಷ ರೂ. ಗಳ ನಗದು ಹಣವನ್ನು ಪಡೆದಿದ್ದಾನೆ. ತದನಂತರ ಆನ್‌ಲೈನ್ ಪೇಮೆಂಟ್ ಸೇರಿ ಇದೇ ತರ ರೂ.1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸೇರಿರುತ್ತದೆ”ʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದಪ್ಪ ಬೆಂಗಳೂರಿನ ಒಂದು ಹೋಟೆಲ್‌ಗೆ ಕರೆದುಕೊಂಡು, ಹೋಗಿ, ಬಿ.ಜೆ.ಪಿ ಹಿರಿಯ ನಾಯಕರಿಗೆ ಮತ್ತು ಇತ್ತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ಗಳ ನಗದನ್ನು ಕುಡ್ಲಿಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸ್ಸೆಸ್ ಮುಖಂಡ ನಾಗಣ್ಣ ಎಂಬವರ ‌ಸಮ್ಮುಖದಲ್ಲಿ ಪಡೆದಿದ್ದಾನೆ” ಎಂದು ಶಿವಮೂರ್ತಿ ಪತ್ರದಲ್ಲಿ ಆರೋಪಿಸಿದ್ದಾರೆ.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಿ ನನ್ನ ಜಮೀನಿನ ಬೆಳೆಗಳನ್ನು ಮಾರಾಟ ಮಾಡಿ, ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ಮೇಲೆ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ (ಎಸ್.ಸಿ) ಬಿಜೆಪಿ ಟಿಕೆಟ್ ಘೋಷಣೆಯಾದಾಗ, ಅದರಲ್ಲಿ ನನ್ನ ಬದಲಿಗೆ ಬಿ.ರಾಮು ಎಂಬುವವರಿಗೆ ಟಿಕೆಟ್ ಸಿಗುತ್ತದೆ.‌ ಇದರಿಂದ ನನಗೆ ವಂಚನೆ ಆಗಿರುವುದು ಅರಿವಾಗಿದೆ” ಎಂದು ತಿಳಿಸಿದ್ದಾರೆ.

”ಹಣ ಪಡೆದವರಿಗೆ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿಲ್ಲ. ಬೇರೆಯವರ ಫೋನ್ ನಿಂದ್ ಕರೆ ಮಾಡಿ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ ನ್ಯಾಯ ಒದಗಿಸಿ ಕೊಡಬೇಕು” ಎಂದು ಮುಖ್ಯಮಂತ್ರಿಗಳನ್ನು ಶಿವಮೂರ್ತಿ ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ಪತ್ರದಲ್ಲಿ ಶಿವಮೂರ್ತಿ ಅವರ ಸಹಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಅವರು ನೀಡಿಲ್ಲ.

ಇದನ್ನೂ ಓದಿ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...