Homeಕರ್ನಾಟಕಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ‘ಮೀಸಲು ವಿಧಾನಸಭಾ ಕ್ಷೇತ್ರ (ಎಸ್‌.ಸಿ)ದಲ್ಲಿ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಮುಖಂಡರು ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಪಿ.ಡಬ್ಲ್ಯೂಡಿ ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ.

ʼಪುತ್ತೂರಿನ ಬಿಜೆಪಿ ಮುಖಂಡರ ಶೇಖರ್.ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಎಂಬುವವರು ಹಣ ಪಡೆದು ವಂಚನೆ ಮಾಡಿದ್ದಾರೆʼʼ ಎಂದು ಶಿವಮೂರ್ತಿಯವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ”ಹಣ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ನನ್ನ ಹಣವನ್ನು ವಾಪಸ್ಸು ಕೊಡಿಸಿ ನ್ಯಾಯ ಒದಗಿಸಬೇಕು” ಎಂದು ದೂರುದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

”ರೇವಣಸಿದ್ದಪ್ಪ ಎಂಬುವವನು ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಆ ಬಳಿಕ ಒಂದೆರಡು ಕಾರ್ಯಕ್ರಮದಲ್ಲಿ ಭೇಟಿಯಾದಾಗ, 2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸುವುದಾಗಿ 2022ರ ಅಕ್ಟೋಬರ್ 23 ರಂದು ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದಾನೆ. ಶೇಖರ್.ಎಸ್.ಪಿ. ನನ್ನ ಪರಿಚಯ ಆದ ಮೇಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಬೆಂಗಳೂರಿನ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಕಟೀಲು ಅವರು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಯಿಸಿದ್ದರು. ಆ ಬಳಿಕ ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್‌ ವಿಚಾರದ ಎಲ್ಲಾ ವ್ಯವಹಾರವನ್ನು ಶೇಖರ್ ಅವರ ಬಳಿ ಮಾತನಾಡಿ ಎಂದು ತಿಳಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಆ ನಂತರ ಶೇಖರ್.ಎನ್.ಪಿ. ಅವರು ನನ್ನ ಬಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಕೇಳುತ್ತಾರೆ, ಟಿಕೆಟ್‌ ಸಿಗದೆ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ಸು ನೀಡುತ್ತೇನೆಂದು ತಿಳಿಸುತ್ತಾರೆ. ಇದರಂತೆ 2022 ಆಕ್ಟೋಬರ್ 9ರಿಂದ ಶುರುವಾದ ಹಣದ ವ್ಯವಹಾರ ಎಪ್ರಿಲ್ 2023 ಕ್ಕೆ ರೂ.2 ಕೋಟಿ 55 ಲಕ್ಷದ ವರೆಗೂ ಹಣ ಪಡೆದುಕೊಂಡಿರುತ್ತಾರೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

”2002 ಅಕ್ಟೋಬರ್ 15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಒಬ್ಬ ವ್ಯಕ್ತಿಯನ್ನು ಕಳುಹಿಸಿ 50 ಲಕ್ಷ ರೂ. ಗಳ ನಗದು ಹಣವನ್ನು ಪಡೆದಿದ್ದಾನೆ. ತದನಂತರ ಆನ್‌ಲೈನ್ ಪೇಮೆಂಟ್ ಸೇರಿ ಇದೇ ತರ ರೂ.1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸೇರಿರುತ್ತದೆ”ʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದಪ್ಪ ಬೆಂಗಳೂರಿನ ಒಂದು ಹೋಟೆಲ್‌ಗೆ ಕರೆದುಕೊಂಡು, ಹೋಗಿ, ಬಿ.ಜೆ.ಪಿ ಹಿರಿಯ ನಾಯಕರಿಗೆ ಮತ್ತು ಇತ್ತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ಗಳ ನಗದನ್ನು ಕುಡ್ಲಿಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸ್ಸೆಸ್ ಮುಖಂಡ ನಾಗಣ್ಣ ಎಂಬವರ ‌ಸಮ್ಮುಖದಲ್ಲಿ ಪಡೆದಿದ್ದಾನೆ” ಎಂದು ಶಿವಮೂರ್ತಿ ಪತ್ರದಲ್ಲಿ ಆರೋಪಿಸಿದ್ದಾರೆ.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಿ ನನ್ನ ಜಮೀನಿನ ಬೆಳೆಗಳನ್ನು ಮಾರಾಟ ಮಾಡಿ, ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ಮೇಲೆ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ (ಎಸ್.ಸಿ) ಬಿಜೆಪಿ ಟಿಕೆಟ್ ಘೋಷಣೆಯಾದಾಗ, ಅದರಲ್ಲಿ ನನ್ನ ಬದಲಿಗೆ ಬಿ.ರಾಮು ಎಂಬುವವರಿಗೆ ಟಿಕೆಟ್ ಸಿಗುತ್ತದೆ.‌ ಇದರಿಂದ ನನಗೆ ವಂಚನೆ ಆಗಿರುವುದು ಅರಿವಾಗಿದೆ” ಎಂದು ತಿಳಿಸಿದ್ದಾರೆ.

”ಹಣ ಪಡೆದವರಿಗೆ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿಲ್ಲ. ಬೇರೆಯವರ ಫೋನ್ ನಿಂದ್ ಕರೆ ಮಾಡಿ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ ನ್ಯಾಯ ಒದಗಿಸಿ ಕೊಡಬೇಕು” ಎಂದು ಮುಖ್ಯಮಂತ್ರಿಗಳನ್ನು ಶಿವಮೂರ್ತಿ ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ಪತ್ರದಲ್ಲಿ ಶಿವಮೂರ್ತಿ ಅವರ ಸಹಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಅವರು ನೀಡಿಲ್ಲ.

ಇದನ್ನೂ ಓದಿ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...