Homeಕರ್ನಾಟಕಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ‘ಮೀಸಲು ವಿಧಾನಸಭಾ ಕ್ಷೇತ್ರ (ಎಸ್‌.ಸಿ)ದಲ್ಲಿ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಮುಖಂಡರು ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಪಿ.ಡಬ್ಲ್ಯೂಡಿ ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ.

ʼಪುತ್ತೂರಿನ ಬಿಜೆಪಿ ಮುಖಂಡರ ಶೇಖರ್.ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಎಂಬುವವರು ಹಣ ಪಡೆದು ವಂಚನೆ ಮಾಡಿದ್ದಾರೆʼʼ ಎಂದು ಶಿವಮೂರ್ತಿಯವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ”ಹಣ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ನನ್ನ ಹಣವನ್ನು ವಾಪಸ್ಸು ಕೊಡಿಸಿ ನ್ಯಾಯ ಒದಗಿಸಬೇಕು” ಎಂದು ದೂರುದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

”ರೇವಣಸಿದ್ದಪ್ಪ ಎಂಬುವವನು ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಆ ಬಳಿಕ ಒಂದೆರಡು ಕಾರ್ಯಕ್ರಮದಲ್ಲಿ ಭೇಟಿಯಾದಾಗ, 2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸುವುದಾಗಿ 2022ರ ಅಕ್ಟೋಬರ್ 23 ರಂದು ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದಾನೆ. ಶೇಖರ್.ಎಸ್.ಪಿ. ನನ್ನ ಪರಿಚಯ ಆದ ಮೇಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಬೆಂಗಳೂರಿನ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಕಟೀಲು ಅವರು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಯಿಸಿದ್ದರು. ಆ ಬಳಿಕ ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್‌ ವಿಚಾರದ ಎಲ್ಲಾ ವ್ಯವಹಾರವನ್ನು ಶೇಖರ್ ಅವರ ಬಳಿ ಮಾತನಾಡಿ ಎಂದು ತಿಳಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಆ ನಂತರ ಶೇಖರ್.ಎನ್.ಪಿ. ಅವರು ನನ್ನ ಬಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಕೇಳುತ್ತಾರೆ, ಟಿಕೆಟ್‌ ಸಿಗದೆ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ಸು ನೀಡುತ್ತೇನೆಂದು ತಿಳಿಸುತ್ತಾರೆ. ಇದರಂತೆ 2022 ಆಕ್ಟೋಬರ್ 9ರಿಂದ ಶುರುವಾದ ಹಣದ ವ್ಯವಹಾರ ಎಪ್ರಿಲ್ 2023 ಕ್ಕೆ ರೂ.2 ಕೋಟಿ 55 ಲಕ್ಷದ ವರೆಗೂ ಹಣ ಪಡೆದುಕೊಂಡಿರುತ್ತಾರೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

”2002 ಅಕ್ಟೋಬರ್ 15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಒಬ್ಬ ವ್ಯಕ್ತಿಯನ್ನು ಕಳುಹಿಸಿ 50 ಲಕ್ಷ ರೂ. ಗಳ ನಗದು ಹಣವನ್ನು ಪಡೆದಿದ್ದಾನೆ. ತದನಂತರ ಆನ್‌ಲೈನ್ ಪೇಮೆಂಟ್ ಸೇರಿ ಇದೇ ತರ ರೂ.1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸೇರಿರುತ್ತದೆ”ʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದಪ್ಪ ಬೆಂಗಳೂರಿನ ಒಂದು ಹೋಟೆಲ್‌ಗೆ ಕರೆದುಕೊಂಡು, ಹೋಗಿ, ಬಿ.ಜೆ.ಪಿ ಹಿರಿಯ ನಾಯಕರಿಗೆ ಮತ್ತು ಇತ್ತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ಗಳ ನಗದನ್ನು ಕುಡ್ಲಿಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸ್ಸೆಸ್ ಮುಖಂಡ ನಾಗಣ್ಣ ಎಂಬವರ ‌ಸಮ್ಮುಖದಲ್ಲಿ ಪಡೆದಿದ್ದಾನೆ” ಎಂದು ಶಿವಮೂರ್ತಿ ಪತ್ರದಲ್ಲಿ ಆರೋಪಿಸಿದ್ದಾರೆ.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಿ ನನ್ನ ಜಮೀನಿನ ಬೆಳೆಗಳನ್ನು ಮಾರಾಟ ಮಾಡಿ, ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ಮೇಲೆ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ (ಎಸ್.ಸಿ) ಬಿಜೆಪಿ ಟಿಕೆಟ್ ಘೋಷಣೆಯಾದಾಗ, ಅದರಲ್ಲಿ ನನ್ನ ಬದಲಿಗೆ ಬಿ.ರಾಮು ಎಂಬುವವರಿಗೆ ಟಿಕೆಟ್ ಸಿಗುತ್ತದೆ.‌ ಇದರಿಂದ ನನಗೆ ವಂಚನೆ ಆಗಿರುವುದು ಅರಿವಾಗಿದೆ” ಎಂದು ತಿಳಿಸಿದ್ದಾರೆ.

”ಹಣ ಪಡೆದವರಿಗೆ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿಲ್ಲ. ಬೇರೆಯವರ ಫೋನ್ ನಿಂದ್ ಕರೆ ಮಾಡಿ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ ನ್ಯಾಯ ಒದಗಿಸಿ ಕೊಡಬೇಕು” ಎಂದು ಮುಖ್ಯಮಂತ್ರಿಗಳನ್ನು ಶಿವಮೂರ್ತಿ ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ಪತ್ರದಲ್ಲಿ ಶಿವಮೂರ್ತಿ ಅವರ ಸಹಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಅವರು ನೀಡಿಲ್ಲ.

ಇದನ್ನೂ ಓದಿ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...