Homeಕರ್ನಾಟಕಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ‘ಮೀಸಲು ವಿಧಾನಸಭಾ ಕ್ಷೇತ್ರ (ಎಸ್‌.ಸಿ)ದಲ್ಲಿ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಮುಖಂಡರು ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಪಿ.ಡಬ್ಲ್ಯೂಡಿ ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ.

ʼಪುತ್ತೂರಿನ ಬಿಜೆಪಿ ಮುಖಂಡರ ಶೇಖರ್.ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಎಂಬುವವರು ಹಣ ಪಡೆದು ವಂಚನೆ ಮಾಡಿದ್ದಾರೆʼʼ ಎಂದು ಶಿವಮೂರ್ತಿಯವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ”ಹಣ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ನನ್ನ ಹಣವನ್ನು ವಾಪಸ್ಸು ಕೊಡಿಸಿ ನ್ಯಾಯ ಒದಗಿಸಬೇಕು” ಎಂದು ದೂರುದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

”ರೇವಣಸಿದ್ದಪ್ಪ ಎಂಬುವವನು ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಆ ಬಳಿಕ ಒಂದೆರಡು ಕಾರ್ಯಕ್ರಮದಲ್ಲಿ ಭೇಟಿಯಾದಾಗ, 2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸುವುದಾಗಿ 2022ರ ಅಕ್ಟೋಬರ್ 23 ರಂದು ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದಾನೆ. ಶೇಖರ್.ಎಸ್.ಪಿ. ನನ್ನ ಪರಿಚಯ ಆದ ಮೇಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಬೆಂಗಳೂರಿನ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಕಟೀಲು ಅವರು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಯಿಸಿದ್ದರು. ಆ ಬಳಿಕ ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್‌ ವಿಚಾರದ ಎಲ್ಲಾ ವ್ಯವಹಾರವನ್ನು ಶೇಖರ್ ಅವರ ಬಳಿ ಮಾತನಾಡಿ ಎಂದು ತಿಳಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಆ ನಂತರ ಶೇಖರ್.ಎನ್.ಪಿ. ಅವರು ನನ್ನ ಬಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಕೇಳುತ್ತಾರೆ, ಟಿಕೆಟ್‌ ಸಿಗದೆ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ಸು ನೀಡುತ್ತೇನೆಂದು ತಿಳಿಸುತ್ತಾರೆ. ಇದರಂತೆ 2022 ಆಕ್ಟೋಬರ್ 9ರಿಂದ ಶುರುವಾದ ಹಣದ ವ್ಯವಹಾರ ಎಪ್ರಿಲ್ 2023 ಕ್ಕೆ ರೂ.2 ಕೋಟಿ 55 ಲಕ್ಷದ ವರೆಗೂ ಹಣ ಪಡೆದುಕೊಂಡಿರುತ್ತಾರೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

”2002 ಅಕ್ಟೋಬರ್ 15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಒಬ್ಬ ವ್ಯಕ್ತಿಯನ್ನು ಕಳುಹಿಸಿ 50 ಲಕ್ಷ ರೂ. ಗಳ ನಗದು ಹಣವನ್ನು ಪಡೆದಿದ್ದಾನೆ. ತದನಂತರ ಆನ್‌ಲೈನ್ ಪೇಮೆಂಟ್ ಸೇರಿ ಇದೇ ತರ ರೂ.1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸೇರಿರುತ್ತದೆ”ʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದಪ್ಪ ಬೆಂಗಳೂರಿನ ಒಂದು ಹೋಟೆಲ್‌ಗೆ ಕರೆದುಕೊಂಡು, ಹೋಗಿ, ಬಿ.ಜೆ.ಪಿ ಹಿರಿಯ ನಾಯಕರಿಗೆ ಮತ್ತು ಇತ್ತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ಗಳ ನಗದನ್ನು ಕುಡ್ಲಿಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸ್ಸೆಸ್ ಮುಖಂಡ ನಾಗಣ್ಣ ಎಂಬವರ ‌ಸಮ್ಮುಖದಲ್ಲಿ ಪಡೆದಿದ್ದಾನೆ” ಎಂದು ಶಿವಮೂರ್ತಿ ಪತ್ರದಲ್ಲಿ ಆರೋಪಿಸಿದ್ದಾರೆ.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಿ ನನ್ನ ಜಮೀನಿನ ಬೆಳೆಗಳನ್ನು ಮಾರಾಟ ಮಾಡಿ, ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ಮೇಲೆ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ (ಎಸ್.ಸಿ) ಬಿಜೆಪಿ ಟಿಕೆಟ್ ಘೋಷಣೆಯಾದಾಗ, ಅದರಲ್ಲಿ ನನ್ನ ಬದಲಿಗೆ ಬಿ.ರಾಮು ಎಂಬುವವರಿಗೆ ಟಿಕೆಟ್ ಸಿಗುತ್ತದೆ.‌ ಇದರಿಂದ ನನಗೆ ವಂಚನೆ ಆಗಿರುವುದು ಅರಿವಾಗಿದೆ” ಎಂದು ತಿಳಿಸಿದ್ದಾರೆ.

”ಹಣ ಪಡೆದವರಿಗೆ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿಲ್ಲ. ಬೇರೆಯವರ ಫೋನ್ ನಿಂದ್ ಕರೆ ಮಾಡಿ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ ನ್ಯಾಯ ಒದಗಿಸಿ ಕೊಡಬೇಕು” ಎಂದು ಮುಖ್ಯಮಂತ್ರಿಗಳನ್ನು ಶಿವಮೂರ್ತಿ ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ಪತ್ರದಲ್ಲಿ ಶಿವಮೂರ್ತಿ ಅವರ ಸಹಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಅವರು ನೀಡಿಲ್ಲ.

ಇದನ್ನೂ ಓದಿ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...