Homeಕರ್ನಾಟಕಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

- Advertisement -
- Advertisement -

ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಳ್ಳಲಿದೆ. ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿ ಅನುಮತಿ ನೀಡದ ಕಾರಣ, ಇಂತಹ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿದೆ. ಆಗಸ್ಟ್ 16 ರಿಂದ ಐದು ದಿನಗಳವರೆಗೆ ನಾಲ್ಕು ತಂಡಗಳಲ್ಲಿ ‘ಜನಾಶೀರ್ವಾದ ಯಾತ್ರೆ’ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಸಂಪುಟ; ಬಿಡಿ ಚಿತ್ರಗಳಲ್ಲಿ ಸಿಗುವ ಪೂರ್ಣ ಚಿತ್ರಣ

ಕೊರೊನಾ ನಿಯಮಗಳನ್ನು ಅನುಸರಿಸಿ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಯಾವುದೇ ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳು ನಡೆಯದಿದ್ದರೂ, ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಪರಿಗಣಿಸಿ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಸಿದ್ದರಾಜು ಹೇಳಿದರು.

ಇದನ್ನೂ ಓದಿ: ಹೊಸ ಮಂತ್ರಿಮಂಡಲ ಹಳೆಯ ಅಸಮತೋಲನ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಂದು ಕಡೆ ಕರೊನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರ್ಕಾರ, ಜನ ಸೇರುವ ಜನಾಶೀರ್ವಾದ ಯಾತ್ರೆಗೆ ಹೇಗೆ ಪರವಾನಗಿ ಕೊಡುತ್ತದೆ? ಇದ್ಯಾವ ದೊಂಬರಾಟ?

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...