Homeಕರ್ನಾಟಕಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

- Advertisement -
- Advertisement -

ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಳ್ಳಲಿದೆ. ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿ ಅನುಮತಿ ನೀಡದ ಕಾರಣ, ಇಂತಹ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿದೆ. ಆಗಸ್ಟ್ 16 ರಿಂದ ಐದು ದಿನಗಳವರೆಗೆ ನಾಲ್ಕು ತಂಡಗಳಲ್ಲಿ ‘ಜನಾಶೀರ್ವಾದ ಯಾತ್ರೆ’ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಸಂಪುಟ; ಬಿಡಿ ಚಿತ್ರಗಳಲ್ಲಿ ಸಿಗುವ ಪೂರ್ಣ ಚಿತ್ರಣ

ಕೊರೊನಾ ನಿಯಮಗಳನ್ನು ಅನುಸರಿಸಿ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಯಾವುದೇ ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳು ನಡೆಯದಿದ್ದರೂ, ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಪರಿಗಣಿಸಿ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಸಿದ್ದರಾಜು ಹೇಳಿದರು.

ಇದನ್ನೂ ಓದಿ: ಹೊಸ ಮಂತ್ರಿಮಂಡಲ ಹಳೆಯ ಅಸಮತೋಲನ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಂದು ಕಡೆ ಕರೊನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರ್ಕಾರ, ಜನ ಸೇರುವ ಜನಾಶೀರ್ವಾದ ಯಾತ್ರೆಗೆ ಹೇಗೆ ಪರವಾನಗಿ ಕೊಡುತ್ತದೆ? ಇದ್ಯಾವ ದೊಂಬರಾಟ?

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...