Homeಮುಖಪುಟಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ಬಿಜೆಪಿಗೆ ಆತಂಕವಿದೆ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಹಿಮಂತ ಬಿಸ್ವಾ ಶರ್ಮಾ ಅವರನ್ನು ಕಳುಹಿಸಿದ್ದು ಮಾತ್ರವಲ್ಲ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇಂಫಾಲ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

- Advertisement -
- Advertisement -

ಮಣಿಪುರದಲ್ಲಿ ಮೂವರು BJP ಶಾಸಕರು ಸೇರಿದಂತೆ ಒಂಭತ್ತು ಶಾಸಕರು ಬಿರೆನ್ ಸಿಂಗ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌ ಪಡೆದು ನಂತರ ಉಂಟಾಗಿದ್ದ ಅಸ್ಥಿರತೆ ಇನ್ನೂ ಮುಂದುವರೆದಿದೆ. ಅವರನ್ನು ಕಾಂಗ್ರೆಸ್‌ ತನ್ನ ಬುಟ್ಟಿಗೆ ಹಾಕಿಕೊಂಡು ಸೆಕ್ಯುಲರ್ ಪ್ರೋಗ್ರೆಸ್ಸಿವ್ ಫ್ರಂಟ್ (ಎಸ್‌ಪಿಎಫ್) ಎಂದು ಕರೆಯಲ್ಪಡುವ ಕಾಂಗ್ರೆಸ್‌ ನೇತೃತ್ವದ ಹೊಸ ಒಕ್ಕೂಟ ರಚಿಸಿದೆ. ಆ ಮೂಲಕ ರಾಜ್ಯಪಾಲರ ಬಳಿ ಅವಿಶ್ವಾಸ ನಿರ್ಣಯ ಮಂಡಿಸಿದೆ.

ಸರ್ಕಾರ ಬಿದ್ದುಹೋಗುವ ಅಪಾಯ ಅರಿತ BJP ಹಲವು ಕಸರತ್ತುಗಳಿಗೆ ಮುಂದಾಗಿದೆ. ಮೊದಲನೇ ಹಂತವಾಗಿ ಬೆಂಬಲ ಹಿಂತೆಗೆದುಕೊಂಡ ನ್ಯಾಷನಲ್ ಪೀಪಲ್ಸ್ ಪಾರ್ಟಿಯು (ಎನ್‌ಪಿಪಿ)ಯ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರ ಶಾಸಕರನ್ನು ಬಿಜೆಪಿಯ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿಸುವುದಕ್ಕಾಗಿ ಇಂದು ಗುವಾಹಟಿಗೆ ಕರೆತಂದಿದೆ.

ಎರಡನೇ ಹೆಜ್ಜೆಯಾಗಿ ಆಪರೇಷನ್ ಹಸ್ತದ ನಾಯಕತ್ವ ವಹಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಸಿಂಗ್ ಅವರನ್ನು ಪ್ರಶ್ನಿಸಲು ಸಿಬಿಐ ತಂಡ ಇಂಫಾಲ್‌ಗೆ ಬಂದಿಳಿದಿದೆ. 332 ಕೋಟಿ ರೂ.ಗಳ ಹಗರಣದ ಆರೋಪವನ್ನು ಈಗ ತನಿಖೆ ನಡೆಸಲು ಸಿಬಿಐ ಮುಂದಾಗಿದೆ. ಅವರು ನಾಲ್ಕು ದಿನಗಳ ಹಿಂದಷ್ಟೇ ಬಿಜೆಪಿಯ ಮೂವರು ಸೇರಿದಂತೆ ಒಂಬತ್ತು ಶಾಸಕರು ಮುಖ್ಯಮಂತ್ರಿ ಬಿರೆನ್ ಸಿಂಗ್ ಅವರಿಗೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡ ನಂತರ ಮಣಿಪುರ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಚಲಾಯಿಸಿದ್ದರು.

ಈ ಎರಡೂ ಕ್ರಮಗಳ ಮೂಲಕ ಅಧಿಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಬಿಜೆಪಿಯ ಕೇಂದ್ರ ನಾಯಕತ್ವ ಅದರ ಜಬಾಬ್ದಾರಿ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಈಶಾನ್ಯದಲ್ಲಿ BJP ಯ ಮುಖ್ಯ ಟ್ರಬಲ್‌ ಶೂಟರ್ ಎನಿಸಿಕೊಂಡಿರುವ ಸಚಿವ ಹಿಮಂತ ಬಿಸ್ವಾ ಶರ್ಮಾ ಎನ್‌ಪಿಪಿ ಶಾಸಕರೊಂದಿಗಿನ ಮಾತುಕತೆಗೆ ಮುಂದಾಗಿದ್ದಾರೆ. ಅಗತ್ಯಬಿದ್ದರೆ ಆ ನಾಲ್ವರು ಶಾಸಕರನ್ನು ಮಾತುಕತೆಗೆ ದೆಹಲಿಗೆ ಕರೆದೊಯ್ಯುವುದಾಗಿ ತಿಳಿಸಿದ್ದಾರೆ.

ಹಿಮಂತ ಬಿಸ್ವಾ ಶರ್ಮಾ ಮಣಿಪುರದ ಪರಿಸ್ಥಿತಿಯನ್ನು “ನಿಯಂತ್ರಣದಲ್ಲಿದೆ” ಎಂದು ಬಣ್ಣಿಸಿದ್ದಾರೆ. ಸಮಸ್ಯೆಯನ್ನು ಪರಿಹರಿಸಲಾಗುವುದು. ಎಲ್ಲಾ ಚರ್ಚೆಗಳು ಸಕಾರಾತ್ಮಕ ವಾತಾವರಣದಲ್ಲಿ ನಡೆಯುತ್ತಿವೆ ಮತ್ತು ಎರಡು ಅಥವಾ ಮೂರು ದಿನಗಳಲ್ಲಿ ಸಕಾರಾತ್ಮಕ ಫಲಿತಾಂಶವು ಹೊರಹೊಮ್ಮುತ್ತದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂನ ರಾಜ್ಯಸಭಾ ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿತು. ಆದರೆ ಇದು ಅನರ್ಹತೆಯನ್ನು ಎದುರಿಸುತ್ತಿರುವ ಮೂವರು ಕಾಂಗ್ರೆಸ್ ಶಾಸಕರಿಗೆ ಮತ ಚಲಾಯಿಸಲು ಅವಕಾಶ ನೀಡುವ ಸ್ಪೀಕರ್ ಅವರ ಕೊನೆಯ ನಿಮಿಷದ ನಿರ್ಧಾರದಿಂದ ಅವರ ವಿಜಯವಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 28 ಸ್ಥಾನಗಳೊಂದಿಗೆ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಗೆ 21 ಸ್ಥಾನಗಳು ದೊರೆತಿದ್ದವು. ಆದರೆ ನಾಲ್ಕು ಎನ್‌ಪಿಪಿ, ನಾಲ್ಕು ಎನ್‌ಪಿಎಫ್, ಒಂದು ಎಲ್‌ಜೆಪಿ, ಒಂದು ಟಿಎಂಸಿ, ಒಬ್ಬ ಸ್ವತಂತ್ರ ಸದಸ್ಯ ಮತ್ತು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯ ಬೆಂಬಲ ಪಡೆಯುವ ಮೂಲಕ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಯಿತು. ಬಿರೆನ್ ಸಿಂಗ್ ಸರ್ಕಾರ ರಚನೆಯ ನಂತರ ಇತರ ಏಳು ಕಾಂಗ್ರೆಸ್ ಶಾಸಕರು ಸಹ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಅವರನ್ನು ಕಾಂಗ್ರೆಸ್‌ ಅನರ್ಹಗೊಳಿಸಿತು.

ಶ್ಯಾಮ್‌ಕುಮಾರ್ ಸಿಂಗ್ ಮತ್ತು ಇತರ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ನಂತರ ವಿಧಾನಸಭೆಯ ಬಲಾಬಲ 52 ಕ್ಕೆ ಕುಸಿದಿದೆ.

ಬಿಜೆಪಿಗೆ ಸದ್ಯಕ್ಕೆ 23 ಸದಸ್ಯರ ಬಲವನ್ನು ಹೊಂದಿದೆ. ಅದರಲ್ಲಿ 18 ಬಿಜೆಪಿ ಶಾಸಕರು, ನಾಲ್ಕು ಎನ್‌ಪಿಎಫ್ ಮತ್ತು ಒಬ್ಬ 1 ಎಲ್‌ಜೆಪಿ ಸದಸ್ಯ ಸೇರಿದ್ದಾರೆ.

ಕಾಂಗ್ರೆಸ್ ತನ್ನದೇ ಆದ 20 ಶಾಸಕರನ್ನು ಹೊಂದಿದೆ. ಒಬ್ಬ ಸದಸ್ಯನನ್ನು ಅನರ್ಹಗೊಳಿಸಲಾಗಿದೆ ಮತ್ತು ಏಳು ಪಕ್ಷಾಂತರಿಗಳನ್ನು ನಿರ್ಬಂಧಿಸಲಾಗಿದೆ. ಬಿರೆನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡ ಒಂಬತ್ತು ಶಾಸಕರು ಕಾಂಗ್ರೆಸ್‌ ಬೆಂಬಲ ಘೋಷಿಸಿದ್ದಾರೆ. ಹಾಗಾಗಿ ಸದ್ಯಕ್ಕೆ 29 ಶಾಸಕರ ಬೆಂಬಲದಿಂದ ಸರ್ಕಾರ ರಚಿಸಲು ತುದಿಗಾಲಲ್ಲಿ ನಿಂತಿದೆ.

ಬಿಜೆಪಿಗೆ ಆತಂಕವಿದೆ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಹಿಮಂತ ಬಿಸ್ವಾ ಶರ್ಮಾ ಅವರನ್ನು ಕಳುಹಿಸಿದ್ದು ಮಾತ್ರವಲ್ಲ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇಂಫಾಲ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

ಈ ಮಧ್ಯೆ, ಮಣಿಪುರ ಡೆವಲಪ್‌ಮೆಂಟ್‌ ಸೊಸೈಟಿ ಹಗರಣದಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಒಕ್ರಮ್ ಇಬೊಬಿ ಸಿಂಗ್ ಅವರನ್ನು ಪ್ರಶ್ನಿಸಲು ಸಿಬಿಐ ಮುಂದಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಾರಂಭವಾದ ತನಿಖೆಯ ಭಾಗವೇ ಈ ಪ್ರಶ್ನಿಸುವುದಾಗಿದೆ ಎಂದು ಕೆಲವು ಮೂಲಗಳು ಹೇಳುತ್ತವೆ. ಇಷ್ಟು ದಿನ ಸುಮ್ಮನಿದ್ದ ಸಿಬಿಐ ಈಗ ಬಿಜೆಪಿ ಸರ್ಕಾರ ಕುಸಿತದಲ್ಲಿರುವುದರಿಂದ ಅಧಿಕಾರ ಬಳಸಲು ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇನ್ನಷ್ಟು ಸುದ್ದಿಗಳು: ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್‌ಗೆ ಮತ್ತೆ ಅಧಿಕಾರದ ಸಾಧ್ಯತೆ

ಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...