Homeಕರ್ನಾಟಕವಿರೋಧ ಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲ: ಸ್ವಪಕ್ಷದ ವಿರುದ್ದವೇ ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ

ವಿರೋಧ ಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲ: ಸ್ವಪಕ್ಷದ ವಿರುದ್ದವೇ ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ

- Advertisement -
- Advertisement -

ವಿಧಾನಸಭೆಯಲ್ಲಿ ವಿರೋಧ ಪಕ್ಷವಾಗಿ ಬಿಜೆಪಿ ಆಡಳಿತ ಪಕ್ಷವನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಅರವಿಂದ ಲಿಂಬಾವಳಿ ಕಿಡಿಕಾರಿದ್ದಾರೆ.

ವಿಧಾನನ ಮಂಡಲದ ಮುಂಗಾರು ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಎಕ್ಸ್‌ನಲ್ಲಿ ಸುದೀರ್ಘ ಬರಹ ಬರೆದು ಅಸಮಾಧ ಹೊರಹಾಕಿರುವ ಲಿಂಬಾವಳಿ ಆಡಳಿತ ಪಕ್ಷದ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿದು ಜನರ ಧ್ವನಿಯಾಗಬೇಕಿದ್ದ ಬಿಜೆಪಿ ವಿರೋಧ ಪಕ್ಷವಾಗಿ ಅದನ್ನು ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸದನದಲ್ಲಿ ಸರ್ಕಾರದ ಅವ್ಯವಹಾರ, ದುರಾಡಳಿತ, ವೈಫಲ್ಯಗಳನ್ನು ಎತ್ತಿ ಹಿಡಿಯಲು ಅವಕಾಶವಿದ್ದರೂ ನಮ್ಮ ನಾಯಕರು ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಲಿಂಬಾವಳಿ ಹೇಳಿದ್ದಾರೆ.

“ಐಟಿ-ಬಿಟಿ ರಾಜಧಾನಿ ಎಂದೇ ಕರೆಸಿಕೊಳ್ಳುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ಜನರು ಮನೆ ಕಳೆದುಕೊಂಡಿದ್ದಾರೆ. ನಮ್ಮ ಪಕ್ಷದ ನಾಯಕರಿಗೆ ಈ ಬಗ್ಗೆ ಬೆಳಕು ಚೆಲ್ಲಬೇಕು ಮತ್ತು ರಾಜ್ಯದ ಜನರ ಸಂಕಷ್ಟಗಳನ್ನು ಪ್ರತಿನಿಧಿಸಬೇಕು ಎಂದು ಅನಿಸದಿರುವುದು ವಿಷಾದನೀಯ! ಹಿಂದಿನ ವರ್ಷದ ಬರ ಪರಿಹಾರ ಕೂಡ ಬರದ ಮುನ್ನ ಎಷ್ಟೋ ರೈತರಿಗೆ ತಲುಪಿಲ್ಲ. ಆದರೆ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಮಾತನಾಡಿಲ್ಲ” ಎಂದಿದ್ದಾರೆ.

“ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಸಾಮರಸ್ಯ, ತಿಳುವಳಿಕೆ ಇಲ್ಲದಿರುವುದು ವಿಷಾದನೀಯ. ಇದು ಆಡಳಿತ ಪಕ್ಷಕ್ಕೆ ಸಂಪೂರ್ಣ ಲಾಭ ಪಡೆಯಲು ಸಹಕಾರಿಯಾಯಿತು. ಸದನದಲ್ಲಿ ಸಿಕ್ಕ ಅವಕಾಶ ಮತ್ತು ಸಮಯವನ್ನು ಸಮರ್ಪಕವಾಗಿ ಬಳಸಿಕೊಳ್ಳದೆ, ಇಡೀ ಅಧಿವೇಶನವನ್ನು ವ್ಯರ್ಥವಾಗಿ ಕಳೆದು, ಇನ್ನೂ ಒಂದು ದಿನ ಬಾಕಿ ಇರುವಾಗ ಸದನದ ಕಲಾಪ ಮೊಟಕುಗೊಳಿಸಿ ಆಡಳಿತ ಪಕ್ಷದ ಜೊತೆ ಕೈಜೋಡಿಸಿರುವ ನಮ್ಮ ಪಕ್ಷದ ನಾಯಕರ ಕ್ರಮ ಪ್ರಶ್ನಾರ್ಹವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟ ಅನುದಾನ ದುರ್ಬಳಕೆ… ಯಾವುದೇ ವಿಚಾರವನ್ನು ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಿಲ್ಲ. ವಿರೋಧ ಪಕ್ಷದ ನಾಯಕರೂ ಈ ವಿಷಯಗಳನ್ನು ಸಮರ್ಥವಾಗಿ ಮಂಡಿಸುವಲ್ಲಿ ವಿಫಲರಾಗಿದ್ದಾರೆ. ಇದರಿಂದಾಗಿ ಆಡಳಿತ ಪಕ್ಷದ ಜೊತೆ ವಿರೋಧ ಪಕ್ಷ ಶಾಮೀಲಾಗಿತ್ತೇನೋ ಎಂಬ ಕುತೂಹಲ ಜನರಲ್ಲಿ ಮೂಡಿದೆ! ಮೈಸೂರಿನಲ್ಲಿ ಮುಡಾ ವಿರುದ್ಧದ ಹೋರಾಟ ಕಣ್ಣೊರೆಸುವ ತಂತ್ರವಾಗಿ ಕಂಡುಬಂದಿದೆ” ಎಂದಿದ್ದಾರೆ.

“ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಅಧಿವೇಶನದಲ್ಲಿ ನಾಯಕರ ವರ್ತನೆಯನ್ನು ಗಮನಿಸಿದರೆ, ಈ ನಾಯಕರ ನೇತೃತ್ವದ ಬಿಜೆಪಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟಗಳಲ್ಲಿ ಹೇಗೆ ತೊಡಗಿಸಿಕೊಳ್ಳಬಹುದು ಎಂಬುದು ಎಲ್ಲಾ ಪ್ರಾಮಾಣಿಕ ಮತ್ತು ಶ್ರಮಿಸುವ ಕಾರ್ಯಕರ್ತರಿಗೆ ದೊಡ್ಡ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

“ಒಂದು ಕಾಲದಲ್ಲಿ ಅಧಿವೇಶನಗಳಲ್ಲಿ ಘರ್ಜನೆ ಮಾಡುತ್ತಿದ್ದು, ಅತ್ಯಂತ ಕಡಿಮೆ ಸ್ಥಾನಗಳಿದ್ದರೂ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದ ನಮ್ಮ ಪಕ್ಷದ ಈ ಸ್ಥಿತಿಯನ್ನು ಕಂಡು ನನಗೆ ತುಂಬಾ ಆತಂಕ ಮತ್ತು ನಿರಾಶೆಯಾಗಿದೆ” ಎಂದಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಿಂದ ಬಿಜೆಪಿ ಅರವಿಂದ ಲಿಂಬಾವಳಿ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಅರವಿಂದ್ ಲಿಂಬಾವಳಿ ಬದಲಾಗಿ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿ ಅವರಿಗೆ ಪಕ್ಷ ಟಿಕೆಟ್ ನೀಡಿತ್ತು. ಮಂಜುಳಾ ಅವರು 44,501 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಪುನೀತ್ ಕೆರೆಹಳ್ಳಿ ಬಂಧನ, ಠಾಣೆಯಲ್ಲಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...