Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...