Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...