Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...