Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...