Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...