Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...