Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...