Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...