Homeಮುಖಪುಟಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

ಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

- Advertisement -
- Advertisement -

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಸ್ಥಾಯಿ ಸಮಿತಿಯ ಆರು ಸದಸ್ಯರ ಚುನಾವಣೆ ಬುಧವಾರ ರಾತ್ರಿ ಗದ್ದಲ ಮತ್ತು ಮುಂದೂಡಿಕೆಗೆ ಸಾಕ್ಷಿಯಾಯಿತು ಎಂದು ಪಿಟಿಐ ವರದಿ ಮಾಡಿದೆ. ಬುಧವಾರ (ಫೆ.22) ಮೇಯರ್ ಆಗಿ ಆಯ್ಕೆಯಾಗಿರುವ ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಮೇಲೆ ಕೆಲವು ಬಿಜೆಪಿ ಕೌನ್ಸಿಲರ್‌ಗಳು ಕಲಾಪದ ವೇಳೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬುಧವಾರ ಆರಂಭವಾಗಿದ್ದ ಅಧಿವೇಶನ ಗುರುವಾರ ಬೆಳಗ್ಗೆ 4 ಗಂಟೆಯವರೆಗೆ ನಡೆಯಿತು. ಈ ವೇಳೆ ಆಮ್ ಆದ್ಮಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರು ದೈಹಿಕ ಮತ್ತು ಮೌಖಿಕ ವಾಗ್ದಾಳಿ ನಡೆಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎರಡೂ ಪಕ್ಷಗಳ ಕೌನ್ಸಿಲರ್‌ಗಳು ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಪರಸ್ಪರರ ಎಸೆದಾಡಿ, ಒಬ್ಬರನ್ನೊಬ್ಬರು ತಳ್ಳಾಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಬುಧವಾರವಷ್ಟೇ ಚುನಾಯಿತರಾದ ಮೇಯರ್ ಶೆಲ್ಲಿ ಒಬೆರಾಯ್, ಕೆಲವು ಬಿಜೆಪಿ ಕೌನ್ಸಿಲರ್‌ಗಳು ಕಲಾಪದ ವೇಳೆ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಿದ್ದು, ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದಾರೆ. “ಸುಪ್ರೀಂಕೋರ್ಟ್ ಆದೇಶದಂತೆ ನಾನು ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದಾಗ ಬಿಜೆಪಿ ಕೌನ್ಸಿಲರ್‌ಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು! ಇದು ಬಿಜೆಪಿಯ ಗೂಂಡಾಗಿರಿ. ಅವರು ಮಹಿಳಾ ಮೇಯರ್ ಮೇಲೆಯೇ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

ಮತ್ತೊಂದೆಡೆ ಮೇಯರ್ ಚುನಾವಣೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಕೌನ್ಸಿಲರ್ ಸತ್ಯ ಶರ್ಮಾ ಕೂಡ, ತಮ್ಮ ಪಕ್ಷದ ಅನೇಕ ಕೌನ್ಸಿಲರ್‌ಗಳಿಗೆ ಗಾಯಗಳಾಗಿವೆ ಎಂದು ಆರೋಪಿಸಿದ್ದಾರೆ. “ಅವರು (ಎಎಪಿ ಕೌನ್ಸಿಲರ್‌ಗಳು) ನಮ್ಮ ನಾಯಕರ ಮೇಲೆ ಬಾಟಲಿ, ಸೇಬು ಮತ್ತು ಬೂಟುಗಳನ್ನು ಎಸೆದಿದ್ದಾರೆ. ನಮ್ಮ ಕೌನ್ಸಿಲರ್ ಪ್ರಮೋದ್ ಗುಪ್ತಾ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.” ಎಂದು ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬುಧವಾರ ಮಧ್ಯಾಹ್ನದ ವೇಳೆಗೆ ಮೇಯರ್ ಮತ್ತು ಉಪಮೇಯರ್ ಆಯ್ಕೆ ನಡೆಯಿತು. ಅದಾದನಂತರ ಸದನವನ್ನು ಒಂದು ಗಂಟೆ ಮುಂದೂಡಲಾಯಿತು. ಆ ಬಳಿಕ ಗದ್ದಲ ಪ್ರಾರಂಭವಾಯಿತು.

ಪಿಟಿಐ ವರದಿ ಪ್ರಕಾರ, ಸದನದ ಪುನರಾರಂಭಕ್ಕಾಗಿ ಕಾಯುತ್ತಿರುವಾಗ ಬಿಜೆಪಿಯ ಸದಸ್ಯರು ಹನುಮಾನ್ ಚಾಲೀಸಾವನ್ನು ಪಠಿಸಿದರು. ಇದು ದೈಹಿಕ ಪರಾಕ್ರಮವನ್ನು ಸಂಕೇತಿಸುವ ಹನುಮಾನ್ ದೇವರಿಗೆ ಪ್ರಾರ್ಥನೆಯಾಗಿದೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಸಂಜೆ 6.15ಕ್ಕೆ ಕಲಾಪ ಪುನರಾರಂಭಗೊಂಡಾಗ, ಕೌನ್ಸಿಲರ್‌ಗಳಿಗೆ ಮತಗಟ್ಟೆ ಬಳಿ ಮೊಬೈಲ್ ಫೋನ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದ ಒಬೆರಾಯ್ ಅವರ ನಿರ್ಧಾರವನ್ನು ಬಿಜೆಪಿ ಸದಸ್ಯರು ವಿರೋಧಿಸಿದರು. ಚುನಾವಣೆಯ ಪ್ರಕ್ರಿಯೆಯಲ್ಲಿ ಮೊಬೈಲ್ ಫೋನ್ ಮತ್ತು ಪೆನ್ನುಗಳನ್ನು ಸಾಗಿಸಲು ಅನುಮತಿ ಇಲ್ಲ ಎಂದು ಬಿಜೆಪಿ ಸದಸ್ಯರು ಗಲಾಟೆ ಆರಂಭಿಸಿದರು.

ಈ ವೇಳೆ ಬಿಜೆಪಿ ಸದಸ್ಯರು, ”ಸರ್ವಾಧಿಕಾರ ನಡೆಸಲು ಬಿಡುವುದಿಲ್ಲ ಮತ್ತು ಮನೆಯಲ್ಲಿ ಎರಡು ಪ್ರತ್ಯೇಕ ನಿಯಮಗಳು ಕಾರ್ಯನಿರ್ವಹಿಸುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ನಡೆದು ಸದನವನ್ನು ರಾತ್ರಿ 11.35 ರವರೆಗೆ ಒಂಬತ್ತು ಬಾರಿ ಮುಂದೂಡಲಾಯಿತು. ನಂತರ ಮತ್ತೆ ಎರಡು ಬಾರಿ ಮುಂಜಾನೆ 4 ಗಂಟೆಯವರೆಗೆ ಮುಂದೂಡಲಾಯಿತು.

ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ನಾಗರಿಕ ಚುನಾವಣೆಯ ನಂತರ ಮೇಯರ್ ಹುದ್ದೆಯ ಚುನಾವಣೆಯನ್ನು ಮೂರು ಬಾರಿ ಮುಂದೂಡಲಾಗಿತ್ತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಅಧ್ಯಕ್ಷರ ನಿರ್ಧಾರವನ್ನು ವಿರೋಧಿಸಿದ್ದರು.

ರಾಜ್ಯಪಾಲರಿಂದ ನಾಮನಿರ್ದೇಶನಗೊಂಡ 10 ಸದಸ್ಯರು-ಆಲ್ಡರ್‌ಮೆನ್‌ಗಳಿಗೆ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶವಿದೆ ಎಂದು ಬಿಜೆಪಿ ವಾದಿಸಿತ್ತು. ಇದಕ್ಕೆ ಎಎಪಿ ವಿರೋಧ ವ್ಯಕ್ತಪಡಿಸಿದ್ದರಿಂದಲೇ ಮೂರು ಬಾರಿಯೂ ಮೇಯರ್ ಚುನಾವಣೆ ಮುಂದೂಡಲಾಯಿತು. ಇತ್ತಿಚೇಗೆ ಒಬೆರಾಯ್ ಅವರು ಬಿಜೆಪಿಯ ಈ ವಾದವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಾಧೀಶರು, ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಹೇಳಿದರು. “ನಾಮನಿರ್ದೇಶಿತ ಸದಸ್ಯರು ಚುನಾವಣೆಗೆ ಹೋಗುವಂತಿಲ್ಲ. ಸಾಂವಿಧಾನಿಕ ನಿಬಂಧನೆಯು ತುಂಬಾ ಸ್ಪಷ್ಟವಾಗಿದೆ” ಎಂದು ನ್ಯಾಯಾಲಯವು ಹೇಳಿತು.

ದೆಹಲಿ ಮಹಾನಗರ ಪಾಲಿಕೆ (ಡಿಎಂಸಿ) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಡಿಸೆಂಬರ್ 4ರಂದು ಪಾಲಿಕೆ ಚುನಾವಣೆ ನಡೆದು ಎರಡು ತಿಂಗಳಾಗಿದೆ.

ಪಾಲಿಕೆ ಚುನಾವಣೆ ಮುಗಿದ ಒಂದು ತಿಂಗಳ ನಂತರ, ಜನವರಿ 6ರಂದು ಮೊದಲ ಬಾರಿಗೆ ಸದನ ನಡೆಯಿತು. ಆದರೆ ಅಂದು ಬಿಜೆಪಿ ಮತ್ತು ಆಪ್ ಸದಸ್ಯರ ನಡುವಿನ ವಾಗ್ವಾದದ ನಂತರ ಅದನ್ನು ಮುಂದೂಡಲಾಯಿತು. ಜನವರಿ 24 ಮತ್ತು ಫೆಬ್ರವರಿ 6 ರಂದು ನಡೆದ ಎರಡನೇ ಮತ್ತು ಮೂರನೇ ಸಭೆಗಳು ಸಹ ಮೇಯರ್ ಆಯ್ಕೆಯ ಚುನಾವಣೆ ಪ್ರಕ್ರಿಯೆ ವಿಫಲವಾದವು. ಇದೀಗ ಸುಪ್ರೀಂ ಕೋರ್ಟ್‌ನ ಆದೇಶದ ನಂತರ ಬುಧವಾರ (ಫೆಬ್ರವರಿ 22) ಹೊಸ ಮೇಯರ್ ಆಯ್ಕೆ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...