Homeಮುಖಪುಟಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

ಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

- Advertisement -
- Advertisement -

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಸ್ಥಾಯಿ ಸಮಿತಿಯ ಆರು ಸದಸ್ಯರ ಚುನಾವಣೆ ಬುಧವಾರ ರಾತ್ರಿ ಗದ್ದಲ ಮತ್ತು ಮುಂದೂಡಿಕೆಗೆ ಸಾಕ್ಷಿಯಾಯಿತು ಎಂದು ಪಿಟಿಐ ವರದಿ ಮಾಡಿದೆ. ಬುಧವಾರ (ಫೆ.22) ಮೇಯರ್ ಆಗಿ ಆಯ್ಕೆಯಾಗಿರುವ ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಮೇಲೆ ಕೆಲವು ಬಿಜೆಪಿ ಕೌನ್ಸಿಲರ್‌ಗಳು ಕಲಾಪದ ವೇಳೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬುಧವಾರ ಆರಂಭವಾಗಿದ್ದ ಅಧಿವೇಶನ ಗುರುವಾರ ಬೆಳಗ್ಗೆ 4 ಗಂಟೆಯವರೆಗೆ ನಡೆಯಿತು. ಈ ವೇಳೆ ಆಮ್ ಆದ್ಮಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರು ದೈಹಿಕ ಮತ್ತು ಮೌಖಿಕ ವಾಗ್ದಾಳಿ ನಡೆಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎರಡೂ ಪಕ್ಷಗಳ ಕೌನ್ಸಿಲರ್‌ಗಳು ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಪರಸ್ಪರರ ಎಸೆದಾಡಿ, ಒಬ್ಬರನ್ನೊಬ್ಬರು ತಳ್ಳಾಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಬುಧವಾರವಷ್ಟೇ ಚುನಾಯಿತರಾದ ಮೇಯರ್ ಶೆಲ್ಲಿ ಒಬೆರಾಯ್, ಕೆಲವು ಬಿಜೆಪಿ ಕೌನ್ಸಿಲರ್‌ಗಳು ಕಲಾಪದ ವೇಳೆ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಿದ್ದು, ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದಾರೆ. “ಸುಪ್ರೀಂಕೋರ್ಟ್ ಆದೇಶದಂತೆ ನಾನು ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದಾಗ ಬಿಜೆಪಿ ಕೌನ್ಸಿಲರ್‌ಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು! ಇದು ಬಿಜೆಪಿಯ ಗೂಂಡಾಗಿರಿ. ಅವರು ಮಹಿಳಾ ಮೇಯರ್ ಮೇಲೆಯೇ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

ಮತ್ತೊಂದೆಡೆ ಮೇಯರ್ ಚುನಾವಣೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಕೌನ್ಸಿಲರ್ ಸತ್ಯ ಶರ್ಮಾ ಕೂಡ, ತಮ್ಮ ಪಕ್ಷದ ಅನೇಕ ಕೌನ್ಸಿಲರ್‌ಗಳಿಗೆ ಗಾಯಗಳಾಗಿವೆ ಎಂದು ಆರೋಪಿಸಿದ್ದಾರೆ. “ಅವರು (ಎಎಪಿ ಕೌನ್ಸಿಲರ್‌ಗಳು) ನಮ್ಮ ನಾಯಕರ ಮೇಲೆ ಬಾಟಲಿ, ಸೇಬು ಮತ್ತು ಬೂಟುಗಳನ್ನು ಎಸೆದಿದ್ದಾರೆ. ನಮ್ಮ ಕೌನ್ಸಿಲರ್ ಪ್ರಮೋದ್ ಗುಪ್ತಾ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.” ಎಂದು ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬುಧವಾರ ಮಧ್ಯಾಹ್ನದ ವೇಳೆಗೆ ಮೇಯರ್ ಮತ್ತು ಉಪಮೇಯರ್ ಆಯ್ಕೆ ನಡೆಯಿತು. ಅದಾದನಂತರ ಸದನವನ್ನು ಒಂದು ಗಂಟೆ ಮುಂದೂಡಲಾಯಿತು. ಆ ಬಳಿಕ ಗದ್ದಲ ಪ್ರಾರಂಭವಾಯಿತು.

ಪಿಟಿಐ ವರದಿ ಪ್ರಕಾರ, ಸದನದ ಪುನರಾರಂಭಕ್ಕಾಗಿ ಕಾಯುತ್ತಿರುವಾಗ ಬಿಜೆಪಿಯ ಸದಸ್ಯರು ಹನುಮಾನ್ ಚಾಲೀಸಾವನ್ನು ಪಠಿಸಿದರು. ಇದು ದೈಹಿಕ ಪರಾಕ್ರಮವನ್ನು ಸಂಕೇತಿಸುವ ಹನುಮಾನ್ ದೇವರಿಗೆ ಪ್ರಾರ್ಥನೆಯಾಗಿದೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಸಂಜೆ 6.15ಕ್ಕೆ ಕಲಾಪ ಪುನರಾರಂಭಗೊಂಡಾಗ, ಕೌನ್ಸಿಲರ್‌ಗಳಿಗೆ ಮತಗಟ್ಟೆ ಬಳಿ ಮೊಬೈಲ್ ಫೋನ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದ ಒಬೆರಾಯ್ ಅವರ ನಿರ್ಧಾರವನ್ನು ಬಿಜೆಪಿ ಸದಸ್ಯರು ವಿರೋಧಿಸಿದರು. ಚುನಾವಣೆಯ ಪ್ರಕ್ರಿಯೆಯಲ್ಲಿ ಮೊಬೈಲ್ ಫೋನ್ ಮತ್ತು ಪೆನ್ನುಗಳನ್ನು ಸಾಗಿಸಲು ಅನುಮತಿ ಇಲ್ಲ ಎಂದು ಬಿಜೆಪಿ ಸದಸ್ಯರು ಗಲಾಟೆ ಆರಂಭಿಸಿದರು.

ಈ ವೇಳೆ ಬಿಜೆಪಿ ಸದಸ್ಯರು, ”ಸರ್ವಾಧಿಕಾರ ನಡೆಸಲು ಬಿಡುವುದಿಲ್ಲ ಮತ್ತು ಮನೆಯಲ್ಲಿ ಎರಡು ಪ್ರತ್ಯೇಕ ನಿಯಮಗಳು ಕಾರ್ಯನಿರ್ವಹಿಸುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ನಡೆದು ಸದನವನ್ನು ರಾತ್ರಿ 11.35 ರವರೆಗೆ ಒಂಬತ್ತು ಬಾರಿ ಮುಂದೂಡಲಾಯಿತು. ನಂತರ ಮತ್ತೆ ಎರಡು ಬಾರಿ ಮುಂಜಾನೆ 4 ಗಂಟೆಯವರೆಗೆ ಮುಂದೂಡಲಾಯಿತು.

ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ನಾಗರಿಕ ಚುನಾವಣೆಯ ನಂತರ ಮೇಯರ್ ಹುದ್ದೆಯ ಚುನಾವಣೆಯನ್ನು ಮೂರು ಬಾರಿ ಮುಂದೂಡಲಾಗಿತ್ತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಅಧ್ಯಕ್ಷರ ನಿರ್ಧಾರವನ್ನು ವಿರೋಧಿಸಿದ್ದರು.

ರಾಜ್ಯಪಾಲರಿಂದ ನಾಮನಿರ್ದೇಶನಗೊಂಡ 10 ಸದಸ್ಯರು-ಆಲ್ಡರ್‌ಮೆನ್‌ಗಳಿಗೆ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶವಿದೆ ಎಂದು ಬಿಜೆಪಿ ವಾದಿಸಿತ್ತು. ಇದಕ್ಕೆ ಎಎಪಿ ವಿರೋಧ ವ್ಯಕ್ತಪಡಿಸಿದ್ದರಿಂದಲೇ ಮೂರು ಬಾರಿಯೂ ಮೇಯರ್ ಚುನಾವಣೆ ಮುಂದೂಡಲಾಯಿತು. ಇತ್ತಿಚೇಗೆ ಒಬೆರಾಯ್ ಅವರು ಬಿಜೆಪಿಯ ಈ ವಾದವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಾಧೀಶರು, ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಹೇಳಿದರು. “ನಾಮನಿರ್ದೇಶಿತ ಸದಸ್ಯರು ಚುನಾವಣೆಗೆ ಹೋಗುವಂತಿಲ್ಲ. ಸಾಂವಿಧಾನಿಕ ನಿಬಂಧನೆಯು ತುಂಬಾ ಸ್ಪಷ್ಟವಾಗಿದೆ” ಎಂದು ನ್ಯಾಯಾಲಯವು ಹೇಳಿತು.

ದೆಹಲಿ ಮಹಾನಗರ ಪಾಲಿಕೆ (ಡಿಎಂಸಿ) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಡಿಸೆಂಬರ್ 4ರಂದು ಪಾಲಿಕೆ ಚುನಾವಣೆ ನಡೆದು ಎರಡು ತಿಂಗಳಾಗಿದೆ.

ಪಾಲಿಕೆ ಚುನಾವಣೆ ಮುಗಿದ ಒಂದು ತಿಂಗಳ ನಂತರ, ಜನವರಿ 6ರಂದು ಮೊದಲ ಬಾರಿಗೆ ಸದನ ನಡೆಯಿತು. ಆದರೆ ಅಂದು ಬಿಜೆಪಿ ಮತ್ತು ಆಪ್ ಸದಸ್ಯರ ನಡುವಿನ ವಾಗ್ವಾದದ ನಂತರ ಅದನ್ನು ಮುಂದೂಡಲಾಯಿತು. ಜನವರಿ 24 ಮತ್ತು ಫೆಬ್ರವರಿ 6 ರಂದು ನಡೆದ ಎರಡನೇ ಮತ್ತು ಮೂರನೇ ಸಭೆಗಳು ಸಹ ಮೇಯರ್ ಆಯ್ಕೆಯ ಚುನಾವಣೆ ಪ್ರಕ್ರಿಯೆ ವಿಫಲವಾದವು. ಇದೀಗ ಸುಪ್ರೀಂ ಕೋರ್ಟ್‌ನ ಆದೇಶದ ನಂತರ ಬುಧವಾರ (ಫೆಬ್ರವರಿ 22) ಹೊಸ ಮೇಯರ್ ಆಯ್ಕೆ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...