Homeಮುಖಪುಟಬಂಗಾಳದ ಮಾನಹಾನಿಗೆ, ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ

ಬಂಗಾಳದ ಮಾನಹಾನಿಗೆ, ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಕೋಲ್ಕತ್ತಾಗೆ ಭೇಟಿ ನೀಡಲಿರುವ ಮೊದಲು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯು ರಾಜ್ಯದ ಮಾನಹಾನಿ ಮಾಡಲು ಮತ್ತು ನಮ್ಮ ಪಕ್ಷದ ನಾಯಕರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಸಂದೇಶಖಾಲಿ ಅಶಾಂತಿ, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಈ ಮಾತುಗಳು ಹೊರಬಿದ್ದಿವೆ.

ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ‘ಬಂಗಾಳದ ಮಾನಹಾನಿ ಮಾಡಲು, ಬಂಗಾಳದ ಅಧಿಕಾರಿಗಳ ಪ್ರತಿಷ್ಠೆಗೆ ಮಸಿ ಬಳಿಯಲು ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದರು.

‘ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಸೂಚನೆ ನೀಡಿದೆ ಎಂದು ಏಜೆನ್ಸಿಗಳು ಹೇಳಿಕೊಳ್ಳುವುದನ್ನು ನಾವು ಕೇಳುತ್ತೇವೆ. ಏಜೆನ್ಸಿಯ ಹೆಸರನ್ನು ಬಳಸಿಕೊಂಡು ಅವರು ಬಲವಂತವಾಗಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ಕಳುಹಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ನೀವು ಗೆಲ್ಲಲು ಬಯಸಿದರೆ, ಜನರ ವಿಶ್ವಾಸ ಗಳಿಸುವ ಮೂಲಕ ಮುನ್ನಡೆಯಿರಿ. ನಮಗೆ ನಿಷ್ಪಕ್ಷಪಾತ ಚುನಾವಣೆ ಬೇಕು, ಬಿಜೆಪಿಯ ಚುನಾವಣೆ ಅಲ್ಲ. ಬಂಗಾಳವು ನಿಷ್ಪಕ್ಷಪಾತ ಚುನಾವಣೆ ಸಾಧ್ಯವಿರುವ ಸ್ಥಳವಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಬಂಗಾಳದ ಬಗ್ಗೆ ದೊಡ್ಡದಾಗಿ ಮಾತನಾಡುವವರಿಗೆ ನಾನು ಹೇಳಲು ಬಯಸುತ್ತೇನೆ, ಉತ್ತರ ಪ್ರದೇಶಕ್ಕೆ ಬನ್ನಿ, ಕಳೆದ ಎರಡು ದಿನಗಳಲ್ಲಿ ಇಬ್ಬರು ಅಪ್ರಾಪ್ತರನ್ನು ಕಟ್ಟಿಹಾಕಿ ಕೊಲೆ ಮಾಡಲಾಗಿದೆ, ಒಮ್ಮೆ ಬಿಲ್ಕಿಸ್‌ನ ಮನೆಯಲ್ಲಿ, ಒಮ್ಮೆ ಹತ್ರಾಸ್‌ನಲ್ಲಿ ನೋಡಿ, ಬಂಗಾಳ ಅದಕ್ಕಿಂತ ಉತ್ತಮವಾಗಿದೆ’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ಬಿಜೆಪಿಯ ಕುಶಲ ಮಾತುಗಳು ಮತ್ತು ಹಿಂಸೆಯನ್ನು ಪ್ರಚೋದಿಸುವ ಪ್ರಯತ್ನಗಳು ಬಂಗಾಳದ ಮಹಿಳೆಯರನ್ನು ಅವಮಾನಿಸಿದೆ. ಬಂಗಾಳದ ತಾಯಂದಿರು ಮತ್ತು ಸಹೋದರಿಯರು ಇದರಿಂದ ಸಂತೋಷವಾಗಿಲ್ಲ’ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಹೌರಾ ಮೈದಾನ-ಎಸ್ಪ್ಲಾನೇಡ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿಯವರು ಹೊಸ ಗರಿಯಾ-ವಿಮಾನ ನಿಲ್ದಾಣ ಮೆಟ್ರೋದ ಕವಿ ಸುಭಾಷ್-ಹೇಮಂತ ಮುಖೋಪಾಧ್ಯಾಯ ವಿಭಾಗ, ಜೋಕಾ-ಎಸ್ಪ್ಲಾನೇಡ್ ಮೆಟ್ರೋದ ತಾರಾತಲಾ-ಮಜೆರ್ಹತ್ ಮೆಟ್ರೋ ವಿಭಾಗವನ್ನು ಸಹ ಉದ್ಘಾಟಿಸಲಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಉತ್ತರ 24 ಪರಗಣ ಜಿಲ್ಲೆಯ ಬರಾಸತ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಸಂದೇಶಖಾಲಿಯಿಂದ ಮಹಿಳೆಯರು ಹೊರಟರು. ಆದರೆ, ಪ್ರಧಾನಿಯವರು ಮಹಿಳೆಯರನ್ನು ಭೇಟಿ ಮಾಡುತ್ತಾರೆಯೇ ಎಂಬ ಬಗ್ಗೆ ಅಧಿಕೃತ ದೃಢೀಕರಣವಿಲ್ಲ.

ಇತ್ತೀಚೆಗಷ್ಟೇ, ಸಂದೇಶಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲಿನ ದಾಳಿ ಮತ್ತು ಅಮಾನತುಗೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರ ಕಸ್ಟಡಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಆದರೆ, ಪಶ್ಚಿಮ ಬಂಗಾಳ ಸರ್ಕಾರವು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ರಾಜ್ಯ ಪೊಲೀಸರು ಶೇಖ್‌ನನ್ನು ಸಿಬಿಐ ತಂಡಕ್ಕೆ ಹಸ್ತಾಂತರಿಸಲು ನಿರಾಕರಿಸಿದರು.

ಇದನ್ನೂ ಓದಿ; ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...