Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸಾಮಾಜಿಕ ಸಾಮರಸ್ಯ ಹಾಳು ಮಾಡುವ ಯತ್ನ: ಸಂಜಯ್ ರಾವತ್

ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸಾಮಾಜಿಕ ಸಾಮರಸ್ಯ ಹಾಳು ಮಾಡುವ ಯತ್ನ: ಸಂಜಯ್ ರಾವತ್

- Advertisement -
- Advertisement -

ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಲು ಭಾರತೀಯ ಜನತಾ ಪಕ್ಷ ಪ್ರಯತ್ನಿಸುತ್ತಿದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ರಾಜ್ಯಸಭಾ ಸಂಸದ ಸಂಜಯ್ ರಾವತ್ ಬುಧವಾರ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ನಾಸಿಕ್‌ನ ತ್ರಯಂಬಕೇಶ್ವರ ದೇವಸ್ಥಾನಕ್ಕೆ ಮುಸ್ಲಿಂ ಸಮುದಾಯದವರು ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಮಂಗಳವಾರ ವಿಶೇಷ ತನಿಖಾ ತಂಡವನ್ನು ರಚಿಸಿದ ಬಳಿಕ ಆ ಬಗ್ಗೆ ಮಾತನಾಡಿದ ಸಂಸದ ರಾವತ್, ”ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಮುಸ್ಲಿಮರು ಹಿಂದೂ ದೇವತೆ ಶಿವನಿಗೆ ಚಾದರ್ – ಧಾರ್ಮಿಕ ಶ್ಲೋಕಗಳೊಂದಿಗೆ ಮುದ್ರಿತವಾದ ಸಾಂಪ್ರದಾಯಕ ಬಟ್ಟೆಯನ್ನು ಅರ್ಪಿಸಲು ಪ್ರಯತ್ನಿಸಿದರು ಎಂದು ಆರೋಪಿಸಿ ದೇವಾಲಯದ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ ನಂತರ ಈ ಆದೇಶವನ್ನು ಹೊರಡಿಸಲಾಗಿದೆ. ಈ ಪ್ರಕರಣದಲ್ಲಿ ನಾಲ್ವರು ಮುಸ್ಲಿಂರನ್ನು ಬಂಧಿಸಲಾಗಿದೆ.

ದಶಕಗಳ ಹಿಂದಿನಿಂದಲೂ ಈ ದೇವಾಲಯದ ಪ್ರವೇಶದ್ವಾರದಲ್ಲಿ ಧೂಪದ್ರವ್ಯವನ್ನು ಅರ್ಪಿಸುವ ಆಚರಣೆಯನ್ನು ನಾವು ಅನುಸರಿಸುತ್ತಿದ್ದೇವೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ.. ಅಂತಹ ಯಾವುದೇ ಸಂಪ್ರದಾಯ ಅಸ್ತಿತ್ವದಲ್ಲಿಲ್ಲ ಎಂದು ದೇವಾಲಯದ ಅಧಿಕಾರಿಗಳು ನಿರಾಕರಿಸಿದ್ದಾರೆ.

”ಸೂಫಿ ಸಂತ ಗುಲಾಬ್ ಶಾ ಸ್ಯಾಂಡಲ್ ಅವರ ಭಕ್ತರು ತಮ್ಮ ಮೆರವಣಿಗೆಯ ಸಮಯದಲ್ಲಿ ತ್ರಯಂಬಕೇಶ್ವರ ದೇವಸ್ಥಾನದ ಮೆಟ್ಟಿಲುಗಳಲ್ಲಿ ಸುಗಂಧದ್ರವ್ಯವನ್ನು ಅರ್ಪಿಸಿ ಮತ್ತು ಹಾದುಹೋಗುವ 100 ವರ್ಷಗಳ ಸಂಪ್ರದಾಯವಿದೆ. ಯಾರೂ ಬಲವಂತವಾಗಿ ದೇವಸ್ಥಾನಕ್ಕೆ ಪ್ರವೇಶಿಸಲು ಪ್ರಯತ್ನಿಸಲಿಲ್ಲ” ಎಂದು ರಾವತ್ ಬುಧವಾರ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ.

”ಕೋಮು ಸೌಹಾರ್ದತೆ ಸಾರುವ ಇಂತಹ ಸಂಪ್ರದಾಯಗಳು ದೇಶಾದ್ಯಂತ ಸಾಮಾನ್ಯವಾಗಿದೆ. ರಾಜ್ಯ ಸರ್ಕಾರವು ಉದ್ದೇಶಪೂರ್ವಕವಾಗಿ ಮಹಾರಾಷ್ಟ್ರದಲ್ಲಿ ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

”ಗಣಪತಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ಏರಿಯಾಗಳ ಮೂಲಕ ಮೆರವಣಿಗೆ ಸಾಗಿದಾಗ ಮುಸ್ಲಿಂ ಸಮುದಾಯವೂ ಮುಂಬೈನ ಪ್ರಸಿದ್ಧ ಲಾಲ್ಬೌಚಾ ರಾಜಾ (ಗಣಪತಿ) ನನ್ನು ಗೌರವಿಸುತ್ತದೆ. ಅವರು ಮೆರವಣಿಗೆ ಮೇಲೆ ಹೂಗಳನ್ನು ಸುರಿಯುತ್ತಾರೆ” ಎಂದು ರಾವತ್ ಹೇಳಿದರು.

ಶಿವಸೇನೆ (ಯುಬಿಟಿ) ಮುಸ್ಲಿಮರನ್ನು ಓಲೈಸುತ್ತಿದೆ ಎಂಬ ಬಿಜೆಪಿ ಶಾಸಕ ನಿತೇಶ್ ರಾಣೆ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ರಾವತ್, ”ಬಾಳಾಸಾಹೇಬ್ ಠಾಕ್ರೆ ಅವರು ದೇಶದ ಶ್ರೇಷ್ಠ ಹಿಂದುತ್ವ ನಾಯಕರಲ್ಲಿ ಒಬ್ಬರು. ಅವರು ಎಂದಿಗೂ ಮುಸ್ಲಿಮರ ಮೇಲೆ ವಿನಾಕಾರಣ ದಾಳಿಗೆ ಆದೇಶ ನೀಡಲಿಲ್ಲ ಅಥವಾ ಉದ್ದೇಶಪೂರ್ವಕವಾಗಿ ಹಿಂದೂ-ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಲು ನಂಬಲಿಲ್ಲ. ಇದು ನಮ್ಮ ‘ಹಿಂದುತ್ವ’ ಅಲ್ಲ. ನಾವು ಇದನ್ನು ಇತರ ಕೆಲವು ಪಕ್ಷಗಳಂತೆ ರಾಜಕೀಯ ಮೈಲೇಜ್ ಗಳಿಸುವ ಸಾಧನವಾಗಿ ಬಳಸಿಕೊಂಡಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...