Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸಾಮಾಜಿಕ ಸಾಮರಸ್ಯ ಹಾಳು ಮಾಡುವ ಯತ್ನ: ಸಂಜಯ್ ರಾವತ್

ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸಾಮಾಜಿಕ ಸಾಮರಸ್ಯ ಹಾಳು ಮಾಡುವ ಯತ್ನ: ಸಂಜಯ್ ರಾವತ್

- Advertisement -
- Advertisement -

ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಲು ಭಾರತೀಯ ಜನತಾ ಪಕ್ಷ ಪ್ರಯತ್ನಿಸುತ್ತಿದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ರಾಜ್ಯಸಭಾ ಸಂಸದ ಸಂಜಯ್ ರಾವತ್ ಬುಧವಾರ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ನಾಸಿಕ್‌ನ ತ್ರಯಂಬಕೇಶ್ವರ ದೇವಸ್ಥಾನಕ್ಕೆ ಮುಸ್ಲಿಂ ಸಮುದಾಯದವರು ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಮಂಗಳವಾರ ವಿಶೇಷ ತನಿಖಾ ತಂಡವನ್ನು ರಚಿಸಿದ ಬಳಿಕ ಆ ಬಗ್ಗೆ ಮಾತನಾಡಿದ ಸಂಸದ ರಾವತ್, ”ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಮುಸ್ಲಿಮರು ಹಿಂದೂ ದೇವತೆ ಶಿವನಿಗೆ ಚಾದರ್ – ಧಾರ್ಮಿಕ ಶ್ಲೋಕಗಳೊಂದಿಗೆ ಮುದ್ರಿತವಾದ ಸಾಂಪ್ರದಾಯಕ ಬಟ್ಟೆಯನ್ನು ಅರ್ಪಿಸಲು ಪ್ರಯತ್ನಿಸಿದರು ಎಂದು ಆರೋಪಿಸಿ ದೇವಾಲಯದ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ ನಂತರ ಈ ಆದೇಶವನ್ನು ಹೊರಡಿಸಲಾಗಿದೆ. ಈ ಪ್ರಕರಣದಲ್ಲಿ ನಾಲ್ವರು ಮುಸ್ಲಿಂರನ್ನು ಬಂಧಿಸಲಾಗಿದೆ.

ದಶಕಗಳ ಹಿಂದಿನಿಂದಲೂ ಈ ದೇವಾಲಯದ ಪ್ರವೇಶದ್ವಾರದಲ್ಲಿ ಧೂಪದ್ರವ್ಯವನ್ನು ಅರ್ಪಿಸುವ ಆಚರಣೆಯನ್ನು ನಾವು ಅನುಸರಿಸುತ್ತಿದ್ದೇವೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ.. ಅಂತಹ ಯಾವುದೇ ಸಂಪ್ರದಾಯ ಅಸ್ತಿತ್ವದಲ್ಲಿಲ್ಲ ಎಂದು ದೇವಾಲಯದ ಅಧಿಕಾರಿಗಳು ನಿರಾಕರಿಸಿದ್ದಾರೆ.

”ಸೂಫಿ ಸಂತ ಗುಲಾಬ್ ಶಾ ಸ್ಯಾಂಡಲ್ ಅವರ ಭಕ್ತರು ತಮ್ಮ ಮೆರವಣಿಗೆಯ ಸಮಯದಲ್ಲಿ ತ್ರಯಂಬಕೇಶ್ವರ ದೇವಸ್ಥಾನದ ಮೆಟ್ಟಿಲುಗಳಲ್ಲಿ ಸುಗಂಧದ್ರವ್ಯವನ್ನು ಅರ್ಪಿಸಿ ಮತ್ತು ಹಾದುಹೋಗುವ 100 ವರ್ಷಗಳ ಸಂಪ್ರದಾಯವಿದೆ. ಯಾರೂ ಬಲವಂತವಾಗಿ ದೇವಸ್ಥಾನಕ್ಕೆ ಪ್ರವೇಶಿಸಲು ಪ್ರಯತ್ನಿಸಲಿಲ್ಲ” ಎಂದು ರಾವತ್ ಬುಧವಾರ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ.

”ಕೋಮು ಸೌಹಾರ್ದತೆ ಸಾರುವ ಇಂತಹ ಸಂಪ್ರದಾಯಗಳು ದೇಶಾದ್ಯಂತ ಸಾಮಾನ್ಯವಾಗಿದೆ. ರಾಜ್ಯ ಸರ್ಕಾರವು ಉದ್ದೇಶಪೂರ್ವಕವಾಗಿ ಮಹಾರಾಷ್ಟ್ರದಲ್ಲಿ ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

”ಗಣಪತಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ಏರಿಯಾಗಳ ಮೂಲಕ ಮೆರವಣಿಗೆ ಸಾಗಿದಾಗ ಮುಸ್ಲಿಂ ಸಮುದಾಯವೂ ಮುಂಬೈನ ಪ್ರಸಿದ್ಧ ಲಾಲ್ಬೌಚಾ ರಾಜಾ (ಗಣಪತಿ) ನನ್ನು ಗೌರವಿಸುತ್ತದೆ. ಅವರು ಮೆರವಣಿಗೆ ಮೇಲೆ ಹೂಗಳನ್ನು ಸುರಿಯುತ್ತಾರೆ” ಎಂದು ರಾವತ್ ಹೇಳಿದರು.

ಶಿವಸೇನೆ (ಯುಬಿಟಿ) ಮುಸ್ಲಿಮರನ್ನು ಓಲೈಸುತ್ತಿದೆ ಎಂಬ ಬಿಜೆಪಿ ಶಾಸಕ ನಿತೇಶ್ ರಾಣೆ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ರಾವತ್, ”ಬಾಳಾಸಾಹೇಬ್ ಠಾಕ್ರೆ ಅವರು ದೇಶದ ಶ್ರೇಷ್ಠ ಹಿಂದುತ್ವ ನಾಯಕರಲ್ಲಿ ಒಬ್ಬರು. ಅವರು ಎಂದಿಗೂ ಮುಸ್ಲಿಮರ ಮೇಲೆ ವಿನಾಕಾರಣ ದಾಳಿಗೆ ಆದೇಶ ನೀಡಲಿಲ್ಲ ಅಥವಾ ಉದ್ದೇಶಪೂರ್ವಕವಾಗಿ ಹಿಂದೂ-ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಲು ನಂಬಲಿಲ್ಲ. ಇದು ನಮ್ಮ ‘ಹಿಂದುತ್ವ’ ಅಲ್ಲ. ನಾವು ಇದನ್ನು ಇತರ ಕೆಲವು ಪಕ್ಷಗಳಂತೆ ರಾಜಕೀಯ ಮೈಲೇಜ್ ಗಳಿಸುವ ಸಾಧನವಾಗಿ ಬಳಸಿಕೊಂಡಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...