Homeಮುಖಪುಟದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

- Advertisement -
- Advertisement -

ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿಯಿಂದ ರಾಜ್ಯದ ಎಎಪಿ ಶಾಸಕರನ್ನು ಬೇಟೆಯಾಡುವ ಪ್ರಯತ್ನಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಎಲ್ಲಾ ಶಾಸಕರನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ತಮ್ಮ ನಿವಾಸದಲ್ಲಿ ಸಭೆಗೆ ಕರೆದಿದ್ದಾರೆ.

ದೆಹಲಿಯ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ದಾಳಿಗೊಳಗಾದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಬಿಜೆಪಿಯು ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿದ ಕೆಲವೇ ಗಂಟೆಗಳ ಕೇಜ್ರಿವಾಲ್ ಅವರು ಈ ಸಭೆಯನ್ನು ಕರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಎಎಪಿ ಶಾಸಕರಿಗೆ ಪಕ್ಷವನ್ನು ತೊರೆಯಲು ಬಿಜೆಪಿ 20 ಕೋಟಿ ರೂ.ಗಳನ್ನು ಆಫರ್ ಮಾಡಿದೆ ಮತ್ತು ಅವರ ವಿರುದ್ಧ ಪಿತೂರಿ ಮಾಡಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ ಅನ್ನು ಬಳಸುತ್ತಿದೆ” ಎಂದು ಸಿಸೋಡಿಯಾ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ಎಎಪಿ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ‘ರಾಜಕೀಯ ವ್ಯವಹಾರಗಳ ಸಮಿತಿ’(PAC)ಯು ರಾಜ್ಯದ ಎಎಪಿ ಶಾಸಕರನ್ನು ಬೇಟೆಯಾಡುವ ಪ್ರಯತ್ನಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ.

“ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಪಿಎಸಿ ಸಭೆ ನಡೆದಿದ್ದು, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದೆಹಲಿಯಲ್ಲಿ ಸರ್ಕಾರವನ್ನು ಬೀಳಿಸುವ ಪ್ರಯತ್ನದ ಕುರಿತು PAC ನಿರ್ಣಯವನ್ನು ಅಂಗೀಕರಿಸಿದೆ. ಸೋಡಿಯಾ ಅವರ ನಿವಾಸದಿಂದ ಯಾವುದೇ ದಾಖಲೆಗಳು, ಲೆಕ್ಕಕ್ಕೆ ಸಿಗದ ಹಣ, ಆಭರಣಗಳು ಪತ್ತೆಯಾಗಿಲ್ಲ” ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

“ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಅಸಂವಿಧಾನಿಕ ವಿಧಾನಗಳನ್ನು ಬಳಸುತ್ತಿದೆ. ಒಬ್ಬ ಎಎಪಿ ಶಾಸಕರೂ ಪಕ್ಷವನ್ನು ಬಿಡುವುದಿಲ್ಲ ಎಂದು ನಾವು ದೆಹಲಿಯ ಜನರಿಗೆ ಭರವಸೆ ನೀಡುತ್ತೇವೆ. ವಿರೋಧ ಪಕ್ಷದ ರಾಜ್ಯ ಸರ್ಕಾರಗಳನ್ನು ಉರುಳಿಸಲು ಮತ್ತು ಕೇಂದ್ರ ಏಜೆನ್ಸಿಗಳಿಗೆ ಬೆದರಿಕೆ ಹಾಕಲು ತಮ್ಮ ಸಮಯವನ್ನು ಬಳಸುವ ಬದಲು ಭಾರತದ ಜನರಿಗಾಗಿ ಕೆಲಸ ಮಾಡಲು ತಮ್ಮ ಶಕ್ತಿಯನ್ನು ಬಳಸಬೇಕೆಂದು ನಾವು ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇವೆ” ಎಂದು ಸಂಜಯ್ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ನಾಲ್ವರು ಎಎಪಿ ಶಾಸಕರಿಗೆ ಪಕ್ಷಕ್ಕೆ ಸೇರಲು ತಲಾ 20 ಕೋಟಿ ಆಫರ್ ನೀಡಲಾಗಿದೆ ಎಂದು ಪಕ್ಷದ ಸಂಸದ ಸಂಜಯ್ ಸಿಂಗ್ ಹೇಳಿದ ನಂತರ ಮನೀಶ್ ಸಿಸೋಡಿಯಾಸ್ ಅವರು ಬಿಜೆಪಿ ಕುದುರೆ ವ್ಯಾಪಾರ ನಡೆಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

“ಬಿಜೆಪಿಯ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣ ಸಚಿವರ ವಿರುದ್ಧ ನಕಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಎಎಪಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...