Homeಮುಖಪುಟದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

- Advertisement -
- Advertisement -

ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿಯಿಂದ ರಾಜ್ಯದ ಎಎಪಿ ಶಾಸಕರನ್ನು ಬೇಟೆಯಾಡುವ ಪ್ರಯತ್ನಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಎಲ್ಲಾ ಶಾಸಕರನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ತಮ್ಮ ನಿವಾಸದಲ್ಲಿ ಸಭೆಗೆ ಕರೆದಿದ್ದಾರೆ.

ದೆಹಲಿಯ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ದಾಳಿಗೊಳಗಾದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಬಿಜೆಪಿಯು ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿದ ಕೆಲವೇ ಗಂಟೆಗಳ ಕೇಜ್ರಿವಾಲ್ ಅವರು ಈ ಸಭೆಯನ್ನು ಕರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಎಎಪಿ ಶಾಸಕರಿಗೆ ಪಕ್ಷವನ್ನು ತೊರೆಯಲು ಬಿಜೆಪಿ 20 ಕೋಟಿ ರೂ.ಗಳನ್ನು ಆಫರ್ ಮಾಡಿದೆ ಮತ್ತು ಅವರ ವಿರುದ್ಧ ಪಿತೂರಿ ಮಾಡಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ ಅನ್ನು ಬಳಸುತ್ತಿದೆ” ಎಂದು ಸಿಸೋಡಿಯಾ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ಎಎಪಿ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ‘ರಾಜಕೀಯ ವ್ಯವಹಾರಗಳ ಸಮಿತಿ’(PAC)ಯು ರಾಜ್ಯದ ಎಎಪಿ ಶಾಸಕರನ್ನು ಬೇಟೆಯಾಡುವ ಪ್ರಯತ್ನಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ.

“ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಪಿಎಸಿ ಸಭೆ ನಡೆದಿದ್ದು, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದೆಹಲಿಯಲ್ಲಿ ಸರ್ಕಾರವನ್ನು ಬೀಳಿಸುವ ಪ್ರಯತ್ನದ ಕುರಿತು PAC ನಿರ್ಣಯವನ್ನು ಅಂಗೀಕರಿಸಿದೆ. ಸೋಡಿಯಾ ಅವರ ನಿವಾಸದಿಂದ ಯಾವುದೇ ದಾಖಲೆಗಳು, ಲೆಕ್ಕಕ್ಕೆ ಸಿಗದ ಹಣ, ಆಭರಣಗಳು ಪತ್ತೆಯಾಗಿಲ್ಲ” ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

“ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಅಸಂವಿಧಾನಿಕ ವಿಧಾನಗಳನ್ನು ಬಳಸುತ್ತಿದೆ. ಒಬ್ಬ ಎಎಪಿ ಶಾಸಕರೂ ಪಕ್ಷವನ್ನು ಬಿಡುವುದಿಲ್ಲ ಎಂದು ನಾವು ದೆಹಲಿಯ ಜನರಿಗೆ ಭರವಸೆ ನೀಡುತ್ತೇವೆ. ವಿರೋಧ ಪಕ್ಷದ ರಾಜ್ಯ ಸರ್ಕಾರಗಳನ್ನು ಉರುಳಿಸಲು ಮತ್ತು ಕೇಂದ್ರ ಏಜೆನ್ಸಿಗಳಿಗೆ ಬೆದರಿಕೆ ಹಾಕಲು ತಮ್ಮ ಸಮಯವನ್ನು ಬಳಸುವ ಬದಲು ಭಾರತದ ಜನರಿಗಾಗಿ ಕೆಲಸ ಮಾಡಲು ತಮ್ಮ ಶಕ್ತಿಯನ್ನು ಬಳಸಬೇಕೆಂದು ನಾವು ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇವೆ” ಎಂದು ಸಂಜಯ್ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ನಾಲ್ವರು ಎಎಪಿ ಶಾಸಕರಿಗೆ ಪಕ್ಷಕ್ಕೆ ಸೇರಲು ತಲಾ 20 ಕೋಟಿ ಆಫರ್ ನೀಡಲಾಗಿದೆ ಎಂದು ಪಕ್ಷದ ಸಂಸದ ಸಂಜಯ್ ಸಿಂಗ್ ಹೇಳಿದ ನಂತರ ಮನೀಶ್ ಸಿಸೋಡಿಯಾಸ್ ಅವರು ಬಿಜೆಪಿ ಕುದುರೆ ವ್ಯಾಪಾರ ನಡೆಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

“ಬಿಜೆಪಿಯ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣ ಸಚಿವರ ವಿರುದ್ಧ ನಕಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಎಎಪಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...