Homeಮುಖಪುಟಲಾಕ್‌ಡೌನ್‌ನಲ್ಲಿ ಸಾವಿರಾರು ಜನರೊಂದಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ: ತೀವ್ರ ಖಂಡನೆ

ಲಾಕ್‌ಡೌನ್‌ನಲ್ಲಿ ಸಾವಿರಾರು ಜನರೊಂದಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ: ತೀವ್ರ ಖಂಡನೆ

ದೇಶದಲ್ಲಿ ಕೊರೊನಾ ಮೂರನೇ ಹಂತಕ್ಕೆ ತಲುಪುತ್ತಿದೆ ಎಂದು ಪ್ರಧಾನಿ ಮತ್ತು ಅಧಿಕಾರಿಗಳು ಆತಂಕ ವ್ಯಕ್ತಪಡಿಸುತ್ತಿರುವ ನಡುವೆಯೇ ಜನವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರೇ ಈ ರೀತಿ ಜನಜಂಗುಳಿಯ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

- Advertisement -
- Advertisement -

ದೇಶವೇ ಲಾಕ್‌ಡೌನ್ ಆಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರುವಾಗ ಬಿಜೆಪಿ ಶಾಸಕರೊಬ್ಬರು ತಮ್ಮ ಹುಟ್ಟುಹಬ್ಬವನ್ನು ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಆ ಮೂಲಕ ತಮ್ಮದೇ ಪಕ್ಷದಿಂದ ಆಯ್ಕೆಯಾದ ಪ್ರಧಾನಿ ನರೇಂದ್ರ ಮೋದಿ ಮಾತುಗಳನ್ನು ಉಲ್ಲಂಘಿಸಿದ್ದು, ಜನರಿಂದ ವ್ಯಾಪಕ ಟೀಕೆಕ್ಕೊಳಗಾಗಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಇಡಗೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಜೆಪಿಯ ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲ ಜಯರಾಂ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಸಲಾ ಜಯರಾಂ ತುರುವೇಕೆರೆ ಶಾಸಕರು. ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಇಡಗೂರಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಲ್ಲದೇ, ಹುಟ್ಟುಹಬ್ಬಕ್ಕೆ ಬಿರಿಯಾನಿ ಮಾಡಿಸಿದ್ದು, ಶಾಸಕರೇ ಊಟ ಬಡಿಸುವ ವಿಡಿಯೋಗಳು ಹರಿದಾಡುತ್ತಿವೆ. ಪೊಲೀಸರೂ ಸಹ ಊಟ ಮಾಡಿದ್ದಾರೆ. ಲಾಕ್‌ಡೌನ್ ಆದಾಗಿನಿಂದ ಅಗತ್ಯ ವಸ್ತುಗಳನ್ನು ಕೊಳ್ಳಲು ಜನರು ಬೀದಿಗೆ ಬಂದಾಗ ಮನಬಂದಂತೆ ಲಾಠಿ ಬೀಸಿದ ಅದೇ ಪೊಲೀಸರು ನಿನ್ನೆ ಶಾಸಕನ ಹುಟ್ಟುಹಬ್ಬದಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ತಾವೂ ಭಾಗವಹಿಸಿ, ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಲೂ ಅವಕಾಶ ಕೊಟ್ಟಿದ್ದೇಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಮಸಾಲ ಜಯರಾಂ ತಮ್ಮ ಹುಟ್ಟುಹಬ್ಬವನ್ನು ಜನಸಂದಣಿಯ ನಡುವೆ ಆಚರಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಜನತೆಗೆ ಮಾಡಿಕೊಂಡ ಮನವಿಯನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ. ಲಾಕ್‌ಡೌನ್‌ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಅತ್ತ ಪ್ರಧಾನಿಗಳು ಅವಲತ್ತುಕೊಳ್ಳುತ್ತಿದ್ದರೆ ಇತ್ತ ಅವರದೇ ಪಕ್ಷದ ಶಾಸಕರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.

ದೇಶದಲ್ಲಿ ಕೊರೊನಾ ಮೂರನೇ ಹಂತಕ್ಕೆ ತಲುಪುತ್ತಿದೆ ಎಂದು ಪ್ರಧಾನಿ ಮತ್ತು ಅಧಿಕಾರಿಗಳು ಆತಂಕ ವ್ಯಕ್ತಪಡಿಸುತ್ತಿರುವ ನಡುವೆಯೇ ಜನವಾಬ್ದಾರಿಯುತ ಸ್ಥಾನದಲ್ಲಿರುವ ಮತ್ತು ಜನರಿಗೆ ಬುದ್ದಿವಾದ ಹೇಳಬೇಕಾಗಿರುವ ಶಾಸಕರೇ ಈ ರೀತಿ ಜನಜಂಗುಳಿಯ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...