Homeಮುಖಪುಟಲಾಕ್‌ಡೌನ್‌ನಲ್ಲಿ ಸಾವಿರಾರು ಜನರೊಂದಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ: ತೀವ್ರ ಖಂಡನೆ

ಲಾಕ್‌ಡೌನ್‌ನಲ್ಲಿ ಸಾವಿರಾರು ಜನರೊಂದಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ: ತೀವ್ರ ಖಂಡನೆ

ದೇಶದಲ್ಲಿ ಕೊರೊನಾ ಮೂರನೇ ಹಂತಕ್ಕೆ ತಲುಪುತ್ತಿದೆ ಎಂದು ಪ್ರಧಾನಿ ಮತ್ತು ಅಧಿಕಾರಿಗಳು ಆತಂಕ ವ್ಯಕ್ತಪಡಿಸುತ್ತಿರುವ ನಡುವೆಯೇ ಜನವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರೇ ಈ ರೀತಿ ಜನಜಂಗುಳಿಯ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

- Advertisement -
- Advertisement -

ದೇಶವೇ ಲಾಕ್‌ಡೌನ್ ಆಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರುವಾಗ ಬಿಜೆಪಿ ಶಾಸಕರೊಬ್ಬರು ತಮ್ಮ ಹುಟ್ಟುಹಬ್ಬವನ್ನು ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಆ ಮೂಲಕ ತಮ್ಮದೇ ಪಕ್ಷದಿಂದ ಆಯ್ಕೆಯಾದ ಪ್ರಧಾನಿ ನರೇಂದ್ರ ಮೋದಿ ಮಾತುಗಳನ್ನು ಉಲ್ಲಂಘಿಸಿದ್ದು, ಜನರಿಂದ ವ್ಯಾಪಕ ಟೀಕೆಕ್ಕೊಳಗಾಗಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಇಡಗೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಜೆಪಿಯ ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲ ಜಯರಾಂ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಸಲಾ ಜಯರಾಂ ತುರುವೇಕೆರೆ ಶಾಸಕರು. ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಇಡಗೂರಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಲ್ಲದೇ, ಹುಟ್ಟುಹಬ್ಬಕ್ಕೆ ಬಿರಿಯಾನಿ ಮಾಡಿಸಿದ್ದು, ಶಾಸಕರೇ ಊಟ ಬಡಿಸುವ ವಿಡಿಯೋಗಳು ಹರಿದಾಡುತ್ತಿವೆ. ಪೊಲೀಸರೂ ಸಹ ಊಟ ಮಾಡಿದ್ದಾರೆ. ಲಾಕ್‌ಡೌನ್ ಆದಾಗಿನಿಂದ ಅಗತ್ಯ ವಸ್ತುಗಳನ್ನು ಕೊಳ್ಳಲು ಜನರು ಬೀದಿಗೆ ಬಂದಾಗ ಮನಬಂದಂತೆ ಲಾಠಿ ಬೀಸಿದ ಅದೇ ಪೊಲೀಸರು ನಿನ್ನೆ ಶಾಸಕನ ಹುಟ್ಟುಹಬ್ಬದಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ತಾವೂ ಭಾಗವಹಿಸಿ, ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಲೂ ಅವಕಾಶ ಕೊಟ್ಟಿದ್ದೇಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಮಸಾಲ ಜಯರಾಂ ತಮ್ಮ ಹುಟ್ಟುಹಬ್ಬವನ್ನು ಜನಸಂದಣಿಯ ನಡುವೆ ಆಚರಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಜನತೆಗೆ ಮಾಡಿಕೊಂಡ ಮನವಿಯನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ. ಲಾಕ್‌ಡೌನ್‌ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಅತ್ತ ಪ್ರಧಾನಿಗಳು ಅವಲತ್ತುಕೊಳ್ಳುತ್ತಿದ್ದರೆ ಇತ್ತ ಅವರದೇ ಪಕ್ಷದ ಶಾಸಕರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.

ದೇಶದಲ್ಲಿ ಕೊರೊನಾ ಮೂರನೇ ಹಂತಕ್ಕೆ ತಲುಪುತ್ತಿದೆ ಎಂದು ಪ್ರಧಾನಿ ಮತ್ತು ಅಧಿಕಾರಿಗಳು ಆತಂಕ ವ್ಯಕ್ತಪಡಿಸುತ್ತಿರುವ ನಡುವೆಯೇ ಜನವಾಬ್ದಾರಿಯುತ ಸ್ಥಾನದಲ್ಲಿರುವ ಮತ್ತು ಜನರಿಗೆ ಬುದ್ದಿವಾದ ಹೇಳಬೇಕಾಗಿರುವ ಶಾಸಕರೇ ಈ ರೀತಿ ಜನಜಂಗುಳಿಯ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...