Homeಮುಖಪುಟಬಿಜೆಪಿಯವರು ನನ್ನ ಹೇಳಿಕೆ ತಿರುಚಿ ದೇಶವೇ ಮಾತನಾಡುವ ಹಾಗೆ ಮಾಡಿದರು: ಉದಯನಿಧಿ ಸ್ಟಾಲಿನ್

ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ದೇಶವೇ ಮಾತನಾಡುವ ಹಾಗೆ ಮಾಡಿದರು: ಉದಯನಿಧಿ ಸ್ಟಾಲಿನ್

- Advertisement -
- Advertisement -

ಸನಾತನದ ಧರ್ಮದ ಕುರಿತ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಡಿಎಂಕೆ ಯುವ ನಾಯಕ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮೊದಲ ಬಾರಿಗೆ ಸಾರ್ವಜನಿಕೆ ವೇದಿಕೆಯಲ್ಲಿ ಮಾತನಾಡಿದ್ದು, “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನನ್ನ ಹೇಳಿಕೆಯನ್ನು ತಿರುಚಿ, ಇಡೀ ದೇಶವೇ ನನ್ನ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವಂತೆ ಮಾಡಿತು” ಎಂದಿದ್ದಾರೆ.

ಕರೂರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಡಿಎಂಕೆ ಯುವ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇವಲ ಮೂರು ನಿಮಿಷ ಮಾತನಾಡಿದ್ದೆ. ಎಲ್ಲರನ್ನೂ ಸಮಾನತೆಯಿಂದ ಕಾಣಬೇಕು. ತಾರತಮ್ಯವನ್ನು ಮಾಡಬಾರದು. ತಾರತಮ್ಯಗಳಂತಹ ಪ್ರಯತ್ನಗಳನ್ನು ನಿರ್ಮೂಲನೆ ಮಾಡಬೇಕು ಎಂದಿದ್ದೆ. ಆದರೆ, ಬಿಜೆಪಿಯವರು ನನ್ನ ಹೇಳಿಕೆಯನ್ನು ತಿರುಚಿ ದೊಡ್ಡದು ಮಾಡಿ ಇಡೀ ದೇಶ ನನ್ನ ಬಗ್ಗೆ ಮಾತನಾಡುವಂತೆ ಮಾಡಿದರು” ಎಂದು ಹೇಳಿದ್ದಾರೆ.

“ಯಾರೋ ಒಬ್ಬರು ದೇವ ಮಾನವರು ನನ್ನ ತಲೆಗೆ 5-10 ಕೋಟಿ ರೂ. ಘೋಷಣೆ ಮಾಡಿದ್ದರು. ಕ್ಷಮೆ ಕೇಳುವಂತೆ ಒತ್ತಾಯಿಸಿದರು. ಆದರೆ, ನಾನು ಯಾವುದೇ ಕಾರಣಕ್ಕೆ ಕ್ಷಮೆ ಯಾಚಿಸುವುದಿಲ್ಲ ಮತ್ತು ಹೇಳಿಕೆ ಹಿಂಪಡೆಯುವುದಿಲ್ಲ ಎಂದಿದ್ದೆ. ನಾನು ಸ್ಟಾಲಿನ್ ಅವರ ಮಗ ಮತ್ತು ಕಲೈಗ್ನಾರ್ ಅವರ ಮೊಮ್ಮಗ, ಅವರು ತೋರಿಸಿಕೊಟ್ಟ ಸಿದ್ದಾಂತಕ್ಕೆ ಬದ್ದವಾಗಿದ್ದೇನೆ ಎಂದಿದ್ದೆ. ಪ್ರಕರಣ ಈಗ ನ್ಯಾಯಾಲದಯಲ್ಲಿದೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದು ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.

ಉದಯನಿಧಿ ವಿವಾದ ಏನು ?

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಚೆನ್ನೈನಲ್ಲಿ ಪ್ರಗತಿಪರ ಚಿಂತಕರ ವೇದಿಕೆ ಆಯೋಜಿಸಿದ್ದ ಸನಾತನ ನಿರ್ಮೂಲನೆ ಎಂಬ ಕಾರ್ಯಕ್ರಮದಲ್ಲಿ, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ರೋಗಗಳಿದ್ದಂತೆ. ಅದಕ್ಕೆ ತಾತ್ಕಾಲಿಕ ಮದ್ದು ಮಾಡಿದರೆ ಸಾಲದು. ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಬಿಜೆಪಿ ಉದಯನಿಧಿ ಮತ್ತು ಅವರ ಡಿಎಂಕೆ ಪಕ್ಷದ ಮೇಲೆ ಮುಗಿ ಬಿದ್ದಿತ್ತು. ಉದಯನಿಧಿ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಪ್ರಸ್ತುತ ಮದ್ರಾಸ್ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು, ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಇದನ್ನೂ ಓದಿ : 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...