Homeಮುಖಪುಟಬಿಜೆಪಿಯವರು ನನ್ನ ಹೇಳಿಕೆ ತಿರುಚಿ ದೇಶವೇ ಮಾತನಾಡುವ ಹಾಗೆ ಮಾಡಿದರು: ಉದಯನಿಧಿ ಸ್ಟಾಲಿನ್

ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ದೇಶವೇ ಮಾತನಾಡುವ ಹಾಗೆ ಮಾಡಿದರು: ಉದಯನಿಧಿ ಸ್ಟಾಲಿನ್

- Advertisement -
- Advertisement -

ಸನಾತನದ ಧರ್ಮದ ಕುರಿತ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಡಿಎಂಕೆ ಯುವ ನಾಯಕ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮೊದಲ ಬಾರಿಗೆ ಸಾರ್ವಜನಿಕೆ ವೇದಿಕೆಯಲ್ಲಿ ಮಾತನಾಡಿದ್ದು, “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನನ್ನ ಹೇಳಿಕೆಯನ್ನು ತಿರುಚಿ, ಇಡೀ ದೇಶವೇ ನನ್ನ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವಂತೆ ಮಾಡಿತು” ಎಂದಿದ್ದಾರೆ.

ಕರೂರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಡಿಎಂಕೆ ಯುವ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇವಲ ಮೂರು ನಿಮಿಷ ಮಾತನಾಡಿದ್ದೆ. ಎಲ್ಲರನ್ನೂ ಸಮಾನತೆಯಿಂದ ಕಾಣಬೇಕು. ತಾರತಮ್ಯವನ್ನು ಮಾಡಬಾರದು. ತಾರತಮ್ಯಗಳಂತಹ ಪ್ರಯತ್ನಗಳನ್ನು ನಿರ್ಮೂಲನೆ ಮಾಡಬೇಕು ಎಂದಿದ್ದೆ. ಆದರೆ, ಬಿಜೆಪಿಯವರು ನನ್ನ ಹೇಳಿಕೆಯನ್ನು ತಿರುಚಿ ದೊಡ್ಡದು ಮಾಡಿ ಇಡೀ ದೇಶ ನನ್ನ ಬಗ್ಗೆ ಮಾತನಾಡುವಂತೆ ಮಾಡಿದರು” ಎಂದು ಹೇಳಿದ್ದಾರೆ.

“ಯಾರೋ ಒಬ್ಬರು ದೇವ ಮಾನವರು ನನ್ನ ತಲೆಗೆ 5-10 ಕೋಟಿ ರೂ. ಘೋಷಣೆ ಮಾಡಿದ್ದರು. ಕ್ಷಮೆ ಕೇಳುವಂತೆ ಒತ್ತಾಯಿಸಿದರು. ಆದರೆ, ನಾನು ಯಾವುದೇ ಕಾರಣಕ್ಕೆ ಕ್ಷಮೆ ಯಾಚಿಸುವುದಿಲ್ಲ ಮತ್ತು ಹೇಳಿಕೆ ಹಿಂಪಡೆಯುವುದಿಲ್ಲ ಎಂದಿದ್ದೆ. ನಾನು ಸ್ಟಾಲಿನ್ ಅವರ ಮಗ ಮತ್ತು ಕಲೈಗ್ನಾರ್ ಅವರ ಮೊಮ್ಮಗ, ಅವರು ತೋರಿಸಿಕೊಟ್ಟ ಸಿದ್ದಾಂತಕ್ಕೆ ಬದ್ದವಾಗಿದ್ದೇನೆ ಎಂದಿದ್ದೆ. ಪ್ರಕರಣ ಈಗ ನ್ಯಾಯಾಲದಯಲ್ಲಿದೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದು ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.

ಉದಯನಿಧಿ ವಿವಾದ ಏನು ?

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಚೆನ್ನೈನಲ್ಲಿ ಪ್ರಗತಿಪರ ಚಿಂತಕರ ವೇದಿಕೆ ಆಯೋಜಿಸಿದ್ದ ಸನಾತನ ನಿರ್ಮೂಲನೆ ಎಂಬ ಕಾರ್ಯಕ್ರಮದಲ್ಲಿ, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ರೋಗಗಳಿದ್ದಂತೆ. ಅದಕ್ಕೆ ತಾತ್ಕಾಲಿಕ ಮದ್ದು ಮಾಡಿದರೆ ಸಾಲದು. ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಬಿಜೆಪಿ ಉದಯನಿಧಿ ಮತ್ತು ಅವರ ಡಿಎಂಕೆ ಪಕ್ಷದ ಮೇಲೆ ಮುಗಿ ಬಿದ್ದಿತ್ತು. ಉದಯನಿಧಿ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಪ್ರಸ್ತುತ ಮದ್ರಾಸ್ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು, ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಇದನ್ನೂ ಓದಿ : 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...