Homeಮುಖಪುಟಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಕೇಂದ್ರ ಸರ್ಕಾರದ ಜಾತಿಗಣತಿ ತೀರ್ಮಾನ ನಂತರ ಯೂಟರ್ನ್ ಹೊಡೆದ ಬಿಜೆಪಿ, ಮೈತ್ರಿ ಪಕ್ಷಗಳ ನಾಯಕರಿವರು!

- Advertisement -
- Advertisement -

ಮುಂದಿನ ಜನಗಣತಿಯ ಜೊತೆಗೆ ಜಾತಿ ಗಣತಿ ಕೂಡಾ ನಡೆಸುವುದಾಗಿ ಕೇಂದ್ರ ಸರ್ಕಾರವು ಏಪ್ರಿಲ್ 30ರ ಬುಧವಾರ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಂಪುಟದ ರಾಜಕೀಯ ವಿಷಯಗಳ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಈ ಘೋಷಣೆಯು ದೇಶಾದ್ಯಂತ ರಾಜಕೀಯ, ಸಾಮಾಜಿಕ ಮತ್ತು ಆಡಳಿತಾತ್ಮಕ ಚರ್ಚೆಗಳಿಗೆ ನಾಂದಿ ಹಾಡಿದೆ. ಬಿಜೆಪಿ ಯೂಟರ್ನ್‌

ಜಾತಿ ಗಣತಿಯು ಚುನಾವಣೆಯ ಪ್ರಮುಖ ವಿಷಯವಾಗಿ ವಿಪಕ್ಷಗಳು ಪ್ರಚಾರ ಮಾಡುತ್ತಿದ್ದಾಗ ಬಿಜೆಪಿ ಅದಕ್ಕೆ ತದ್ವಿರುದ್ಧವಾಗಿ ತೀವ್ರ ವಿರೋಧ ಮಾಡಿ ಪ್ರಚಾರ ಕೈಗೊಂಡಿತ್ತು. ಅದರ ನಾಯಕರು ಈ ಹಿಂದಿನಿಂದಲೂ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಲೆ ಬಂದಿದ್ದಾರೆ. ಆದರೆ, ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡ ನಂತರ ಇಡೀ ಬಿಜೆಪಿ, ಅದರ ಮಿತ್ರ ಪಕ್ಷಗಳು, ಸಂಘಪರಿವಾರ ಮತ್ತು ಅದರ ಬೆಂಬಲಿಗರು ಸಂಪೂರ್ಣವಾಗಿ ಯೂಟರ್ನ್ ಮಾಡಿದ್ದಾರೆ. ಈ ಹಿಂದೆ ಜಾತಿಗಣತಿಯ್ನು ವಿರೋಧ ಮಾಡಿದ್ದ ಪ್ರಮುಖ ವ್ಯಕ್ತಿಗಳ ಪಟ್ಟಿ ಕೆಳಗಿದೆ.

ಜಾತಿ ಗಣತಿ ವಿರೋಧ ಮಾಡಿದ್ದ ಪ್ರಮುಖ ನಾಯಕರು

  • ಪ್ರಧಾನಿ ನರೇಂದ್ರ ಮೋದಿ

2023 ರಲ್ಲಿ ಮಾತನಾಡಿದ್ದ ಮೋದಿ ಜಾತಿ ಗಣತಿಯನ್ನು “ಜಾತಿಯ ಆಧಾರದಲ್ಲಿ ದೇಶವನ್ನು ಒಡೆಯುವ ಪಾಪಕೃತ್ಯ” ಎಂದು ಟೀಕಿಸಿದ್ದರು. ಜಾತಿ ಗಣತಿ ಒಂದು ”ಮಾವೋವಾದಿ ಚಿಂತನೆ” ಎಂದು ಅವರು ಹೇಳಿದ್ದು, ವಿರೋಧ ಪಕ್ಷಗಳು “ನಗರ ನಕ್ಸಲ್” ಚಿಂತನೆಯ ಭಾಗವಾಗಿ ಇದನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದರು.ಇಂತಹ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿ ಅವರ ಸರ್ಕಾರವೇ ಜಾತಿ ಗಣತಿಯನ್ನು ಮುಂದಿನ ಜನಗಣತಿಯ ಜೊತೆಗೆ ನಡೆಸಲು ನಿರ್ಧರಿಸಿದೆ.

  • ಗೃಹ ಸಚಿವ ಅಮಿತ್ ಶಾ

ಜಾತಿ ಗಣತಿಯನ್ನು ಒಂದು ಸಂಕೀರ್ಣ ವಿಷಯವೆಂದು ಪರಿಗಣಿಸಿದ್ದ ಅಮಿತ್ ಶಾ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಲು ವಿರೋಧಿಸಿತು. 2021 ರಲ್ಲಿ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಜಾತಿ ಗಣತಿಯನ್ನು ವಿರೋಧಿಸಿತು, ಇದು “ರಾಜಕೀಯ ಪ್ರೇರಿತ ಫಲಿತಾಂಶಗಳಿಗೆ” ಕಾರಣವಾಗಲಿದೆ ಎಂದು ಹೇಳಿತ್ತು.

ಅಕ್ಟೋಬರ್ 2, 2023ರಂದು ಬಿಹಾರದ ಜಾತಿ ಸಮೀಕ್ಷೆಯ ಫಲಿತಾಂಶ ಬಿಡುಗಡೆಯಾದಾಗ ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಅದನ್ನು “ತಪ್ಪು ರಾಜಕಾರಣ” ಎಂದು ಕರೆದಿದ್ದರು. “ಯಾದವ್ ಮತ್ತು ಮುಸ್ಲಿಂ ಸಮುದಾಯಗಳ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ” ಎಂದು ಆರೋಪಿಸಿದ್ದ ಅವರು ಇದು ನೀತಿಶ್ ಕುಮಾರ್ ಸರ್ಕಾರದ “ಅಪಾಯಕಾರಿ ರಾಜಕಾರಣ” ಎಂದು ಟೀಕಿಸಿದ್ದರು.

ಅದಗ್ಯೂ, ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಹೇಳಿಕೆಯಿಂದ ಸಂಪೂರ್ಣವಾಗಿ ಯೂಟರ್ನ್ ಮಾಡಿದ್ದು, ಜಾತಿ ಗಣತಿಯನ್ನು ಮುಂದಿನ ಜನಗಣತಿಯಲ್ಲಿ ಸೇರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಏಪ್ರಿಲ್ 30, 2025ರಂದು “ಐತಿಹಾಸಿಕ” ಎಂದು ಕೊಂಡಾಡಿದ್ದಾರೆ.

“ಸಾಮಾಜಿಕ ನ್ಯಾಯಕ್ಕೆ ಬದ್ಧವಾದ ಮೋದಿ ಸರ್ಕಾರವು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ CCPA (ಕ್ಯಾಬಿನೆಟ್ ಕಮಿಟಿ ಆನ್ ಪೊಲಿಟಿಕಲ್ ಅಫೇರ್ಸ್) ಸಭೆಯಲ್ಲಿ, ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ನಿರ್ಧಾರವು ಸಾಮಾಜಿಕ ಸಮಾನತೆ ಮತ್ತು ಪ್ರತಿಯೊಂದು ವರ್ಗದ ಹಕ್ಕುಗಳಿಗೆ ಬಲವಾದ ಸಂದೇಶವನ್ನು ನೀಡಿದೆ. ಈ ನಿರ್ಧಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಜಾತಿಗಳನ್ನು ಸಬಲೀಕರಣಗೊಳಿಸಲಿದೆ, ಒಗ್ಗಟ್ಟನ್ನು ಉತ್ತೇಜಿಸಲಿದೆ ಮತ್ತು ವಂಚಿತರ ಉನ್ನತಿಗೆ ಹೊಸ ಮಾರ್ಗಗಳನ್ನು ತೆರೆಯಲಿದೆ.” ಎಂದು ಅಮಿತ್ ಶಾ ಹೇಳಿದ್ದಾರೆ.

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಏಪ್ರಿಲ್ 12, 2024ರಂದು ಮಧ್ಯಪ್ರದೇಶದ ಚಿಂದ್ವಾರಾದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ನಡ್ಡಾ, “ನಾವು ಜಾತಿ ಗಣತಿಯನ್ನು ವಿರೋಧಿಸುತ್ತಿಲ್ಲ, ಆದರೆ ಕಾಂಗ್ರೆಸ್ ಈ ವಿಷಯವನ್ನು ಜನರನ್ನು ಒಡೆಯಲು ಬಳಸುತ್ತಿದೆ. ಪ್ರಧಾನಿ ಮೋದಿಯವರು ರಾಜಕೀಯವನ್ನು ಜಾತಿ, ಧರ್ಮ, ಪ್ರದೇಶದ ಆಧಾರದಿಂದ ದೂರವಿಟ್ಟು ಅಭಿವೃದ್ಧಿಯ ಕಡೆಗೆ ಕೊಂಡೊಯ್ದಿದ್ದಾರೆ.” ಎಂದು ಹೇಳಿದ್ದರು.

ಏಪ್ರಿಲ್ 30, 2025ರಂದು ಜೆ.ಪಿ. ನಡ್ಡಾ ಅವರು ಜಾತಿಗಣತಿ ನಿರ್ಧಾರವನ್ನು “ಐತಿಹಾಸಿಕ” ಎಂದು ಕೊಂಡಾಡಿದ್ದಾರೆ. “ಈ ನಿರ್ಧಾರವು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳನ್ನು ಮುಖ್ಯವಾಹಿನಿಗೆ ಕೊಂಡುಬರುವಲ್ಲಿ ಮತ್ತು ದೀರ್ಘಕಾಲದಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ಘನತೆಯನ್ನು ಮರುಸ್ಥಾಪಿಸುವಲ್ಲಿ ಅತ್ಯಂತ ಮಹತ್ವದ್ದಾಗಿದೆ.” ಎಂದು ಹೇಳಿದ್ದಾರೆ.

  • ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಯೂಟರ್ನ್‌

ಯೋಗಿ ಆದಿತ್ಯನಾಥ್ ಅವರು ಜಾತಿ ಗಣತಿಯನ್ನು ಈ ಹಿಂದೆ ವಿರೋಧಿಸಿದ್ದರು. “ಜಾತಿಗಣತಿ ಕೈಗೊಳ್ಳುವವರು ದೇಶವನ್ನು ಒಡೆಯಲು ಬಯಸುತ್ತಾರೆ” ಎಂದು ಅವರು ಹೇಳಿದ್ದರು. ಜಾತಿ ಗಣತಿಯು ಸಾಮಾಜಿಕ ಒಡಕು ಮತ್ತು ಅಶಾಂತಿಗೆ ಕಾರಣವಾಗಬಹುದು ಎಂಬ ಅವರು ಆತಂಕ ವ್ಯಕ್ತಪಡಿಸಿದ್ದರು.

ಅದಾಗ್ಯೂ, ಇದೀಗ ಆದಿತ್ಯನಾಥ್ ಅವರು ಜಾತಿಗಣತಿ ಬಗ್ಗೆಗಿನ ತಮ್ಮ ನಿಲುವನ್ನು ಸಂಪೂರ್ಣವಾಗಿ ಬದಲಾಯಿಸಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರವು “ಅಭೂತಪೂರ್ವ ನಿರ್ಧಾರ” ಎಂದು ಕರೆದಿದ್ದಾರೆ.

  • ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ತೇಜಸ್ವಿ ಸೂರ್ಯ ಅವರ ಜಾತಿ ಗಣತಿಯ ಬಗೆಗಿನ ನಿಲುವು ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಬದಲಾಗಿದೆ. 2024ರಲ್ಲಿ ಅವರು ಕಾಂಗ್ರೆಸ್‌ನ ಜಾತಿ ಗಣತಿಯ ಬೇಡಿಕೆಯನ್ನು ರಾಜಕೀಯ ತಂತ್ರವೆಂದು ಟೀಕಿಸಿದ್ದರು. ಆದರೆ, 2025ರಲ್ಲಿ, ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

2023ರ ಅಕ್ಟೋಬರ್ 31ರಂದು, “ಜಾತಿ ಆಧಾರಿತ ವಿಭಜನೆಗಳು ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ. ಹಿಂದೂ ಸುಧಾರಕರು ಅವುಗಳನ್ನು ಸ್ಪಷ್ಟವಾಗಿ ಖಂಡಿಸಿದ್ದಾರೆ. ಈ ಯುಗದಲ್ಲಿ, ಜಾತಿಯ ಆಧಾರದ ಮೇಲೆ ನಮ್ಮನ್ನು ನಾವು ವಿಭಜಿಸಿಕೊಳ್ಳುವ ಬದಲು ಒಂದಾಗುವುದು ನಮ್ಮ ಕರ್ತವ್ಯವಾಗಿದೆ.” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಆದರೆ ಇದೀಗ ಅವರು ಸಂಪೂರ್ಣವಾಗಿ ಯೂಟರ್ನ್ ತೆಗೆದುಕೊಂಡಿದ್ದಾರೆ.

  • ಕೇಂದ್ರ ಬೃಹತ್ ಕೈಗಾಗರಿಕಾ ಸಚಿವ ಕುಮಾರಸ್ವಾಮಿ ಬಿಜೆಪಿ ಯೂಟರ್ನ್‌

ಕರ್ನಾಟಕದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜಾತಿ ಗಣತಿಯ ಬಗ್ಗೆ ತದ್ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಗೊಂದಲ ಮತ್ತು ಚರ್ಚೆಗೆ ಕಾರಣವಾಗಿದೆ. ಒಂದೆಡೆ, ಅವರು ಕರ್ನಾಟಕದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ತೀವ್ರವಾಗಿ ವಿರೋಧಿಸಿದ್ದು, ಇದನ್ನು “ದ್ವೇಷದ ಗಣತಿ” ಎಂದು ಕರೆದು ರಾಜಕೀಯ ಷಡ್ಯಂತ್ರವೆಂದು ಆರೋಪಿಸಿದ್ದಾರೆ. ಮತ್ತೊಂದೆಡೆ, ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರವನ್ನು “ಐತಿಹಾಸಿಕ ಮತ್ತು ದೂರದೃಷ್ಟಿಯ” ಕ್ರಮವೆಂದು ಶ್ಲಾಘಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಚಾರಣೆ ಹಂತದಲ್ಲಿ 1,700 ಕ್ಕೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಪ್ರಕರಣಗಳು: ಇಡಿ

ವಿಚಾರಣೆ ಹಂತದಲ್ಲಿ 1,700 ಕ್ಕೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಪ್ರಕರಣಗಳು: ಇಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...