Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...