Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...