Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...