Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...