Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...