Homeಮುಖಪುಟಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

ಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಮುಂಬರುವ ನಯಾಬ್ ತಹಶೀಲ್ದಾರ್ ಪರೀಕ್ಷೆಯಲ್ಲಿ ಉರ್ದು ಭಾಷೆಯನ್ನು ಕೈ ಬಿಡಬೇಕು ಎಂಬ ಬಿಜೆಪಿ ಬೇಡಿಕೆಯನ್ನು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಮತ್ತು ವಿರೋಧ ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಟೀಕೆಗೆ ಗುರಿಯಾಗಿದೆ. ಬಿಜೆಪಿಯ ಈ ಬೇಡಿಕೆಯು ಸಾಂಸ್ಕೃತಿಕ ಅಸ್ಮಿತೆಯನ್ನು ಅಳಿಸುವಂತಿದೆ ಎಂದು ಈ ಪಕ್ಷಗಳು ಆರೋಪಿಸಿವೆ ಎಂದು ದಿ ಹಿಂದೂ ಶನಿವಾರ ವರದಿ ಮಾಡಿದೆ. ಜಮ್ಮು ಕಾಶ್ಮೀರ ಕಂದಾಯ

75 ಕಂದಾಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೋಮವಾರ ಹೊರಡಿಸಲಾದ ಅಧಿಸೂಚನೆಯ ಮೂಲಕ, ಜಮ್ಮು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಯು ಅಭ್ಯರ್ಥಿಗಳ “ಉರ್ದುವಿನಲ್ಲಿ ಕೆಲಸ ಮಾಡುವ ಅರಿವು” ಅನ್ನು ಒಂದು ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ ಎಂದು ತಿಳಿಸಿತ್ತು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಉರ್ದು ಭಾಷೆಯನ್ನು ಸಾಮಾನ್ಯವಾಗಿ ಕಂದಾಯ ದಾಖಲೆಗಳು, ಭೂ ವ್ಯವಹಾರಗಳು, ನ್ಯಾಯಾಲಯದ ತೀರ್ಪುಗಳು ಮತ್ತು ಕಾನೂನು ಪತ್ರವ್ಯವಹಾರಗಳಲ್ಲಿ ಬಳಸುವುದರಿಂದ, ಆದಾಯಕ್ಕೆ ಸಂಬಂಧಿಸಿದ ಹುದ್ದೆಗಳಿಗೆ ಭಾಷೆಯ ಮೂಲಭೂತ ತಿಳುವಳಿಕೆ ಅತ್ಯಗತ್ಯ ಎಂದು ಪರಿಗಣಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ಬಿಜೆಪಿ ಶಾಸಕ ಸುನಿಲ್ ಶರ್ಮಾ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸತ್ ಶರ್ಮಾ ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಗುರುವಾರ ಭೇಟಿಯಾಗಿ ನಯಾಬ್ ತಹಶೀಲ್ದಾರ್ ಪರೀಕ್ಷೆಯಲ್ಲಿ ಉರ್ದು ಭಾಷೆಯನ್ನು ತೆಗೆದುಹಾಕುವ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಕೋರಿದ್ದಾರೆ.

ಜಮ್ಮು ಕಾಶ್ಮೀರವು ಐದು ಅಧಿಕೃತ ಭಾಷೆಗಳನ್ನು ಹೊಂದಿರುವುದರಿಂದ, ಅವುಗಳಲ್ಲಿ ಒಂದನ್ನು ಮಾತ್ರ ಪರೀಕ್ಷೆಗೆ ಕಡ್ಡಾಯಗೊಳಿಸುವುದು “ಸಮಾನ ಅವಕಾಶ ಮತ್ತು ಆಡಳಿತಾತ್ಮಕ ನಿಷ್ಪಕ್ಷಪಾತದ ಸಾಂವಿಧಾನಿಕ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಸುನಿಲ್ ಶರ್ಮಾ ಸಿನ್ಹಾಗೆ ಹೇಳಿರುವುದಾಗಿ ವರದಿಯಾಗಿದೆ.

“ಇದು ಅನ್ಯಾಯದ ತಡೆಗೋಡೆಯನ್ನು ಸೃಷ್ಟಿಸುತ್ತದೆ. ವಿಶೇಷವಾಗಿ ಜಮ್ಮು ವಿಭಾಗದ ಆಕಾಂಕ್ಷಿಗಳಿಗೆ ಇದು ಅನನುಕೂಲಕರ  ಆಗಿದೆ” ಎಂದು ಅವರು ಹೇಳಿದ್ದಾಗಿ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅದಾಗ್ಯೂ, ಬಿಜೆಪಿಯ ಈ ಬೇಡಿಕೆಗೆ ಆಡಳಿತರೂಢ ನ್ಯಾಷನಲ್ ಕಾನ್ಫರೆನ್ಸ್‌ ಮತ್ತು ಮತ್ತು ವಿಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ವಿರೋಧಿಸಿವೆ.

ಜಮ್ಮು ಕಾಶ್ಮೀರದ ಆದಾಯ, ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಗಳಲ್ಲಿ ಉರ್ದುವಿನ ಪಾತ್ರವು “ಐತಿಹಾಸಿಕವಾಗಿ ಸ್ಥಾಪಿತವಾಗಿದೆ” ಮತ್ತು “ಯಾವುದೇ ರಾಜಕೀಯ ಅಥವಾ ಪಂಥೀಯ ಕಾರ್ಯಸೂಚಿಯಲ್ಲಿಲ್ಲ” ಎಂದು ನ್ಯಾಷನಲ್ ಕಾನ್ಫರೆನ್ಸ್‌ ಶಾಸಕ ತನ್ವೀರ್ ಸಾದಿಕ್ ಹೇಳಿರುವುದಾಗಿ ಶನಿವಾರ ದಿ ಹಿಂದೂ ಉಲ್ಲೇಖಿಸಿದೆ. ಭಾಷೆಯ ಪಾತ್ರವನ್ನು ದುರ್ಬಲಗೊಳಿಸುವುದು “ಐತಿಹಾಸಿಕವಾಗಿ ಅಪ್ರಾಮಾಣಿಕ” ಎಂದು ಅವರು ಹೇಳಿದ್ದು, ಇದು ಭಾರಿ ಆಡಳಿತಾತ್ಮಕ ಮತ್ತು ಕಾನೂನು ಅಡಚಣೆಗಳಿಗೆ ಕಾರಣವಾಗಬಹುದು ಎಂದು ಅವರು ತಿಳಿಸಿದ್ದಾರೆ.

“ಜಮ್ಮು ಕಾಶ್ಮೀರದ ಐತಿಹಾಸಿಕ ಸಂಸ್ಥೆಗಳು, ಸಾಂಸ್ಕೃತಿಕ ಗುರುತು ಮತ್ತು ಆಡಳಿತಾತ್ಮಕ ನಿರಂತರತೆಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ಅಲ್ಪಾವಧಿಯ ಲಾಭಕ್ಕಾಗಿ ಉರ್ದುವಿನ ಸ್ಥಾನಮಾನವನ್ನು ರಾಜಕೀಯಗೊಳಿಸುವ ಅಥವಾ ಕೋಮುವಾದೀಕರಿಸುವ ಯಾವುದೇ ಪ್ರಯತ್ನವನ್ನು ನಾವು ತಿರಸ್ಕರಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ಮತ್ತು ಪುಲ್ವಾಮಾ ಶಾಸಕ ವಹೀದ್-ಉರ್-ರೆಹಮಾನ್ ಪರ್ರಾ ಪ್ರತಿಕ್ರಿಯಿಸಿ, ಬಿಜೆಪಿಯ ಬೇಡಿಕೆಯನ್ನು ಜಮ್ಮು ಕಾಶ್ಮೀರದ ಶ್ರೀಮಂತ ದಾಖಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅಳಿಸಿಹಾಕುವ ಅಪಾಯಕಾರಿ ನಡೆ ಎಂದು ಬಣ್ಣಿಸಿದ್ದಾರೆ.

“ಉರ್ದು ಒಂದು ಭಾಷೆ ಮಾತ್ರವಲ್ಲ, ಅದು ಈ ಪ್ರದೇಶದ ಪರಂಪರೆಯ ಪ್ರಮುಖ ಭಾಗವಾಗಿದೆ. ಅದನ್ನು ದುರ್ಬಲಗೊಳಿಸುವುದು ಸಮುದಾಯಗಳನ್ನು ವಿಭಜಿಸುತ್ತದೆ ಮತ್ತು ಸ್ಮರಣೆಯನ್ನು ಪುನಃ ಬರೆಯುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ. ಪಿಡಿಪಿ ಮತ್ತೊಬ್ಬ ಶಾಸಕ ನಯೀಮ್ ಅಖ್ತರ್, ಉರ್ದು ಶತಮಾನಗಳಿಂದ ಜಮ್ಮು ಕಾಶ್ಮೀರದ ಅಧಿಕೃತ ಭಾಷೆಯಾಗಿದೆ. ಜಮ್ಮು ಕಾಶ್ಮೀರ ಕಂದಾಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...