Homeಮುಖಪುಟರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ರೈತರನ್ನು, ಖಾಲಿಸ್ತಾನಿಗಳು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕ ಸಂಘಟನೆಗಳಿಂದ ಪ್ರಭಾವಿತವಾಗಿದ್ದಾರೆ ಎಂದು ಮುಂತಾಗಿ ಬಿಂಬಿಸುತ್ತಿವೆ. ಇದುವರೆಗೂ ಕೇವಲ ಹೀಗೆಯೇ ಬಿಂಬಿಸುತ್ತಿದ್ದ ಮುಖ್ಯವಾಹಿನಿಯ ಮಾಧ್ಯಮಗಳು ಈಗ ಮೌನ ಮುರಿದು, ತಮ್ಮ ಬಹುಮುಖ್ಯ ಚರ್ಚೆಗಳನ್ನು ರೈತರ ಪ್ರತಿಭಟನೆಯ ಮೇಲೆ ಕೇಂದ್ರೀಕರಿಸಿವೆ. ಈ ಮೂಲಕ “ರೈತ ಪ್ರತಿಭಟನೆಯು ರಾಜಕೀಯ ಪ್ರೇರಿತ ಮತ್ತು ಭಯೋತ್ಪಾದಕರ ಕೈವಾಡವಿದೆ” ಎನ್ನುತ್ತಾ ಕೂಗಾಡುತ್ತಿದ್ದಾರೆ. ಇದು ಆಶ್ಚರ್ಯಕರವಲ್ಲದಿದ್ದರೂ ಆಸಕ್ತಿದಾಯಕವಾಗಿದೆ.

ಎಲ್ಲರಿಗೂ ತಿಳಿದಿರುವಂತೆ, ಕೆಲವು ಸಿಖ್ಖರು ಸಿಖ್ ಧರ್ಮದ ಧ್ವಜ ‘ನಿಶಾನ್ ಸಾಹೀಬ್’ಅನ್ನು ಕೆಂಪುಕೋಟೆಯಲ್ಲಿ ಹಾರಿಸಿದ್ದಾರೆ. ಆದರೆ ಇದು ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಸಲುವಾಗಿ ಬಿಜೆಪಿ ಕೈಗೊಂಡ ತಂತ್ರ ಎಂಬುದು ಶೀಘ್ರವೇ ತಿಳಿದುಬಂದಿದೆ. ಈ ಘಟನೆಯಲ್ಲಿ ಚರ್ಚೆಗೊಳಪಡುತ್ತಿರುವ ಪ್ರಮುಖ ವ್ಯಕ್ತಿ ದೀಪ್ ಸಿಧು.

ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಗಳ ವಿರುದ್ಧ ದೇಶದಾದ್ಯಂತ ಇಷ್ಟುದೊಡ್ಡ ಪ್ರತಿಭಟನೆ ನಡೆಯುತ್ತದೆ ಎಂದು ಬಿಜೆಪಿ ಊಹಿಸಿರಲಿಲ್ಲ. ಈ ಕಾನೂನುಗಳು ಕಾರ್ಪೊರೇಟ್‌ಗಳ ಪರ ಮತ್ತು ರೈತರ ವಿರೋಧಿಯಾಗಿದೆ ಎಂಬುದು ಪ್ರತಿಭಟನಾ ನಿರತ ರೈತರ ವಾದವಾಗಿದೆ. ಹಾಗಾಗಿಯೇ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ಇದರ ಭಾಗವಾಗಿ 72 ನೇ ಗಣರಾಜ್ಯೋತ್ಸವವನ್ನು ರೈತ ಗಣರಾಜ್ಯೋತ್ಸವವೆಂದು ಆಚರಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೆಹಲಿ ಪೊಲೀಸರು ನೀಡಿದ ಉದ್ದೇಶಿತ ಮಾರ್ಗದಲ್ಲಿಯೇ ಮೆರವಣಿಗೆ ನಡೆಸುವುದಾಗಿ ರೈತರು ಒಪ್ಪಿಕೊಂಡು ರ್ಯಾಲಿಯನ್ನೂ ನಡೆಸಿದರು. ಆದರೆ ರೈತರ ಒಂದು ಗುಂಪು ಮಾತ್ರ ನಿಗದಿತ ಸಮಯಕ್ಕೂ ಮೊದಲೇ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಟ್ರ್ಯಾಕ್ಟರ್ ಪೆರೇಡ್ ನಡೆಸಿತು. ಇದು ಕೊನೆಗೆ ಹಿಂಸಾತ್ಮಕ ರೂಪ ಪಡೆದು ಕೆಂಪುಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸುವಲ್ಲಿಗೆ ಕೊನೆಯಾಯಿತು. ಆದರೆ ವಿಪರ್ಯಾಸವೆಂದರೆ, ಈ ಧ್ವಜವನ್ನು (ಜಗತ್ತಿನಾಧ್ಯಂತ ಇರುವ ಪ್ರತಿಯೊಂದು ಗುರುದ್ವಾರಗಳ ಮೇಲೆ ಹಾರಿಸಲಾಗಿರುವ) ಬಿಜೆಪಿ ಪ್ರಣೀತ ಮಾಧ್ಯಮಗಳು ಖಾಲಿಸ್ತಾನ್ ಚಳುವಳಿಯ ಧ್ವಜ ಎಂದು ಬಿಂಬಿಸಿದವು.

ಟೈಮ್ಸ್‌ ನೌ ಸುದ್ದಿ ಸಂಸ್ಥೆಯು, “Farmers’ stir: Intel reports suggest ISI gave Rs 5 cr to Babbar…” (ರೈತರ ಪ್ರತಿಭಟನೆಗೆ ಐಎಸ್‌ಐ ಉಗ್ರ ಸಂಘಟನೆ 5 ಕೋಟಿ ನೀಡಿದೆ)” ಎಂದು ಸುಳ್ಳು ವರದಿಯೊಂದನ್ನು ಮಾಡಿತ್ತು. ಆದರೆ ಈ ಸುದ್ದಿಯನ್ನು ಈಗಾಗಲೇ ಡಿಲೀಟ್ ಮಾಡಿದೆ. ಇದರ ಲಿಂಕ್ ಇಲ್ಲಿದೆ. ಇದರ ಸ್ಕ್ರೀನ್‌ಶಾಟ್ ಅನ್ನು ಈ ಕೆಳಗೆ ನೀಡಲಾಗಿದೆ.

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಮೂರೂ ಬಿಟ್ಟ ಮಾಧ್ಯಮಗಳು ಮಾಡುತ್ತಿರುವ ನಾಚಿಕೆಗೇಡಿನ ಕೆಲಸಕ್ಕೆ ಇದೇ ಪುರಾವೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಮತ್ತೊಂದೆಡೆ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಮಾಧ್ಯಮಗಳು ಗುರಿಮಾಡಿಕೊಂಡಿದೆ ಎಂದು ದೆಹಲಿಯಲ್ಲಿರುವ ನಾನು ಗೌರಿ (ಕನ್ನಡ) ಮತ್ತು ಗೌರಿ ಲಂಕೇಶ್ ನ್ಯೂಸ್ (ಇಂಗ್ಲಿಷ್) ತಂಡ ವರದಿ ಮಾಡಿದೆ.

ಯಾವುದೇ ಘಟನೆಯನ್ನು ಕೋಮುವಾದೀಕರಣಗೊಳಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ನ ಭಾಗವಾಗಿರುವ ಬಿಜೆಪಿಯ ವಿಶಿಷ್ಟ ಲಕ್ಷಣವಾಗಿದೆ. ಒಬ್ಬರ ಗಮನವನ್ನು ವಾಸ್ತವ ಸಮಸ್ಯೆಯಿಂದ ಬೇರೆಡೆಗೆ ವಿಷಯಾಂತರ ಮಾಡಲು, ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುತ್ತದೆ. ಬಿಜೆಪಿಯ ಈ ಪ್ರವೃತ್ತಿಯನ್ನು ಕರ್ನಾಟಕದದ ಪರ್ಯಾಯ ಕಾನೂನು ವೇದಿಕೆ ತನ್ನ ವರದಿಯಲ್ಲಿ ದಾಖಲಿಸಿದೆ.

ಈ ವರದಿಯ ಪ್ರಕಾರ, ಕರ್ನಾಟಕದಲ್ಲಿ ಇದುವರೆಗೂ ನಡೆದಿರುವ ಹೆಚ್ಚಿನ ಕೋಮು ಗಲಭೆಗಳನ್ನು, ‘ಮಸೀದಿಯ ಆವರಣದಲ್ಲಿ ಸತ್ತ ಹಂದಿಯನ್ನು ಎಸೆಯುವುದು, ದೇವಸ್ಥಾನಗಳ ಮೇಲೆ ಪಾಕಿಸ್ತಾನದ ಹಸಿರುವ ಧ್ವಜವನ್ನು ಹಾರಿಸುವುದು’ ಮುಂತಾದ ಕುತಂತ್ರಗಳನ್ನು ಮಾಡಿ ಪ್ರಚೋದಿಸಿದೆ. ಹಾಗಾಗಿ ದೀಪ್ ಸಿಧು ಮತ್ತು ಅವನ ಗುಂಪು ಮಾಡಿರುವ ಕೃತ್ಯವು ಈ ಸಂಘಪರಿವಾರದ ಅನೈತಿಕ ತಂತ್ರದ ಭಾಗವಾಗಿದೆ. ದೆಹಲಿ ಪೊಲೀಸರು ಬಿಜೆಪಿ ಮತ್ತು ಅದರ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳ ಜೊತೆ ಶಾಮೀಲಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ.

ಕೃಪೆ: ಗೌರಿ ಲಂಕೇಶ್ ನ್ಯೂಸ್


ಇದನ್ನೂ ಓದಿ: 10 ರೈತ ನಾಯಕರ ಮೇಲೆ FIR: ಧ್ವಜ ಹಾರಿಸಿದ ದೀಪ್ ಸಿಧು ಹೆಸರು ಕೈಬಿಟ್ಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...