Homeಮುಖಪುಟರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ರೈತರನ್ನು, ಖಾಲಿಸ್ತಾನಿಗಳು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕ ಸಂಘಟನೆಗಳಿಂದ ಪ್ರಭಾವಿತವಾಗಿದ್ದಾರೆ ಎಂದು ಮುಂತಾಗಿ ಬಿಂಬಿಸುತ್ತಿವೆ. ಇದುವರೆಗೂ ಕೇವಲ ಹೀಗೆಯೇ ಬಿಂಬಿಸುತ್ತಿದ್ದ ಮುಖ್ಯವಾಹಿನಿಯ ಮಾಧ್ಯಮಗಳು ಈಗ ಮೌನ ಮುರಿದು, ತಮ್ಮ ಬಹುಮುಖ್ಯ ಚರ್ಚೆಗಳನ್ನು ರೈತರ ಪ್ರತಿಭಟನೆಯ ಮೇಲೆ ಕೇಂದ್ರೀಕರಿಸಿವೆ. ಈ ಮೂಲಕ “ರೈತ ಪ್ರತಿಭಟನೆಯು ರಾಜಕೀಯ ಪ್ರೇರಿತ ಮತ್ತು ಭಯೋತ್ಪಾದಕರ ಕೈವಾಡವಿದೆ” ಎನ್ನುತ್ತಾ ಕೂಗಾಡುತ್ತಿದ್ದಾರೆ. ಇದು ಆಶ್ಚರ್ಯಕರವಲ್ಲದಿದ್ದರೂ ಆಸಕ್ತಿದಾಯಕವಾಗಿದೆ.

ಎಲ್ಲರಿಗೂ ತಿಳಿದಿರುವಂತೆ, ಕೆಲವು ಸಿಖ್ಖರು ಸಿಖ್ ಧರ್ಮದ ಧ್ವಜ ‘ನಿಶಾನ್ ಸಾಹೀಬ್’ಅನ್ನು ಕೆಂಪುಕೋಟೆಯಲ್ಲಿ ಹಾರಿಸಿದ್ದಾರೆ. ಆದರೆ ಇದು ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಸಲುವಾಗಿ ಬಿಜೆಪಿ ಕೈಗೊಂಡ ತಂತ್ರ ಎಂಬುದು ಶೀಘ್ರವೇ ತಿಳಿದುಬಂದಿದೆ. ಈ ಘಟನೆಯಲ್ಲಿ ಚರ್ಚೆಗೊಳಪಡುತ್ತಿರುವ ಪ್ರಮುಖ ವ್ಯಕ್ತಿ ದೀಪ್ ಸಿಧು.

ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಗಳ ವಿರುದ್ಧ ದೇಶದಾದ್ಯಂತ ಇಷ್ಟುದೊಡ್ಡ ಪ್ರತಿಭಟನೆ ನಡೆಯುತ್ತದೆ ಎಂದು ಬಿಜೆಪಿ ಊಹಿಸಿರಲಿಲ್ಲ. ಈ ಕಾನೂನುಗಳು ಕಾರ್ಪೊರೇಟ್‌ಗಳ ಪರ ಮತ್ತು ರೈತರ ವಿರೋಧಿಯಾಗಿದೆ ಎಂಬುದು ಪ್ರತಿಭಟನಾ ನಿರತ ರೈತರ ವಾದವಾಗಿದೆ. ಹಾಗಾಗಿಯೇ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ಇದರ ಭಾಗವಾಗಿ 72 ನೇ ಗಣರಾಜ್ಯೋತ್ಸವವನ್ನು ರೈತ ಗಣರಾಜ್ಯೋತ್ಸವವೆಂದು ಆಚರಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೆಹಲಿ ಪೊಲೀಸರು ನೀಡಿದ ಉದ್ದೇಶಿತ ಮಾರ್ಗದಲ್ಲಿಯೇ ಮೆರವಣಿಗೆ ನಡೆಸುವುದಾಗಿ ರೈತರು ಒಪ್ಪಿಕೊಂಡು ರ್ಯಾಲಿಯನ್ನೂ ನಡೆಸಿದರು. ಆದರೆ ರೈತರ ಒಂದು ಗುಂಪು ಮಾತ್ರ ನಿಗದಿತ ಸಮಯಕ್ಕೂ ಮೊದಲೇ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಟ್ರ್ಯಾಕ್ಟರ್ ಪೆರೇಡ್ ನಡೆಸಿತು. ಇದು ಕೊನೆಗೆ ಹಿಂಸಾತ್ಮಕ ರೂಪ ಪಡೆದು ಕೆಂಪುಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸುವಲ್ಲಿಗೆ ಕೊನೆಯಾಯಿತು. ಆದರೆ ವಿಪರ್ಯಾಸವೆಂದರೆ, ಈ ಧ್ವಜವನ್ನು (ಜಗತ್ತಿನಾಧ್ಯಂತ ಇರುವ ಪ್ರತಿಯೊಂದು ಗುರುದ್ವಾರಗಳ ಮೇಲೆ ಹಾರಿಸಲಾಗಿರುವ) ಬಿಜೆಪಿ ಪ್ರಣೀತ ಮಾಧ್ಯಮಗಳು ಖಾಲಿಸ್ತಾನ್ ಚಳುವಳಿಯ ಧ್ವಜ ಎಂದು ಬಿಂಬಿಸಿದವು.

ಟೈಮ್ಸ್‌ ನೌ ಸುದ್ದಿ ಸಂಸ್ಥೆಯು, “Farmers’ stir: Intel reports suggest ISI gave Rs 5 cr to Babbar…” (ರೈತರ ಪ್ರತಿಭಟನೆಗೆ ಐಎಸ್‌ಐ ಉಗ್ರ ಸಂಘಟನೆ 5 ಕೋಟಿ ನೀಡಿದೆ)” ಎಂದು ಸುಳ್ಳು ವರದಿಯೊಂದನ್ನು ಮಾಡಿತ್ತು. ಆದರೆ ಈ ಸುದ್ದಿಯನ್ನು ಈಗಾಗಲೇ ಡಿಲೀಟ್ ಮಾಡಿದೆ. ಇದರ ಲಿಂಕ್ ಇಲ್ಲಿದೆ. ಇದರ ಸ್ಕ್ರೀನ್‌ಶಾಟ್ ಅನ್ನು ಈ ಕೆಳಗೆ ನೀಡಲಾಗಿದೆ.

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಮೂರೂ ಬಿಟ್ಟ ಮಾಧ್ಯಮಗಳು ಮಾಡುತ್ತಿರುವ ನಾಚಿಕೆಗೇಡಿನ ಕೆಲಸಕ್ಕೆ ಇದೇ ಪುರಾವೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಮತ್ತೊಂದೆಡೆ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಮಾಧ್ಯಮಗಳು ಗುರಿಮಾಡಿಕೊಂಡಿದೆ ಎಂದು ದೆಹಲಿಯಲ್ಲಿರುವ ನಾನು ಗೌರಿ (ಕನ್ನಡ) ಮತ್ತು ಗೌರಿ ಲಂಕೇಶ್ ನ್ಯೂಸ್ (ಇಂಗ್ಲಿಷ್) ತಂಡ ವರದಿ ಮಾಡಿದೆ.

ಯಾವುದೇ ಘಟನೆಯನ್ನು ಕೋಮುವಾದೀಕರಣಗೊಳಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ನ ಭಾಗವಾಗಿರುವ ಬಿಜೆಪಿಯ ವಿಶಿಷ್ಟ ಲಕ್ಷಣವಾಗಿದೆ. ಒಬ್ಬರ ಗಮನವನ್ನು ವಾಸ್ತವ ಸಮಸ್ಯೆಯಿಂದ ಬೇರೆಡೆಗೆ ವಿಷಯಾಂತರ ಮಾಡಲು, ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುತ್ತದೆ. ಬಿಜೆಪಿಯ ಈ ಪ್ರವೃತ್ತಿಯನ್ನು ಕರ್ನಾಟಕದದ ಪರ್ಯಾಯ ಕಾನೂನು ವೇದಿಕೆ ತನ್ನ ವರದಿಯಲ್ಲಿ ದಾಖಲಿಸಿದೆ.

ಈ ವರದಿಯ ಪ್ರಕಾರ, ಕರ್ನಾಟಕದಲ್ಲಿ ಇದುವರೆಗೂ ನಡೆದಿರುವ ಹೆಚ್ಚಿನ ಕೋಮು ಗಲಭೆಗಳನ್ನು, ‘ಮಸೀದಿಯ ಆವರಣದಲ್ಲಿ ಸತ್ತ ಹಂದಿಯನ್ನು ಎಸೆಯುವುದು, ದೇವಸ್ಥಾನಗಳ ಮೇಲೆ ಪಾಕಿಸ್ತಾನದ ಹಸಿರುವ ಧ್ವಜವನ್ನು ಹಾರಿಸುವುದು’ ಮುಂತಾದ ಕುತಂತ್ರಗಳನ್ನು ಮಾಡಿ ಪ್ರಚೋದಿಸಿದೆ. ಹಾಗಾಗಿ ದೀಪ್ ಸಿಧು ಮತ್ತು ಅವನ ಗುಂಪು ಮಾಡಿರುವ ಕೃತ್ಯವು ಈ ಸಂಘಪರಿವಾರದ ಅನೈತಿಕ ತಂತ್ರದ ಭಾಗವಾಗಿದೆ. ದೆಹಲಿ ಪೊಲೀಸರು ಬಿಜೆಪಿ ಮತ್ತು ಅದರ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳ ಜೊತೆ ಶಾಮೀಲಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ.

ಕೃಪೆ: ಗೌರಿ ಲಂಕೇಶ್ ನ್ಯೂಸ್


ಇದನ್ನೂ ಓದಿ: 10 ರೈತ ನಾಯಕರ ಮೇಲೆ FIR: ಧ್ವಜ ಹಾರಿಸಿದ ದೀಪ್ ಸಿಧು ಹೆಸರು ಕೈಬಿಟ್ಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...