Homeಮುಖಪುಟರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ರೈತರನ್ನು, ಖಾಲಿಸ್ತಾನಿಗಳು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕ ಸಂಘಟನೆಗಳಿಂದ ಪ್ರಭಾವಿತವಾಗಿದ್ದಾರೆ ಎಂದು ಮುಂತಾಗಿ ಬಿಂಬಿಸುತ್ತಿವೆ. ಇದುವರೆಗೂ ಕೇವಲ ಹೀಗೆಯೇ ಬಿಂಬಿಸುತ್ತಿದ್ದ ಮುಖ್ಯವಾಹಿನಿಯ ಮಾಧ್ಯಮಗಳು ಈಗ ಮೌನ ಮುರಿದು, ತಮ್ಮ ಬಹುಮುಖ್ಯ ಚರ್ಚೆಗಳನ್ನು ರೈತರ ಪ್ರತಿಭಟನೆಯ ಮೇಲೆ ಕೇಂದ್ರೀಕರಿಸಿವೆ. ಈ ಮೂಲಕ “ರೈತ ಪ್ರತಿಭಟನೆಯು ರಾಜಕೀಯ ಪ್ರೇರಿತ ಮತ್ತು ಭಯೋತ್ಪಾದಕರ ಕೈವಾಡವಿದೆ” ಎನ್ನುತ್ತಾ ಕೂಗಾಡುತ್ತಿದ್ದಾರೆ. ಇದು ಆಶ್ಚರ್ಯಕರವಲ್ಲದಿದ್ದರೂ ಆಸಕ್ತಿದಾಯಕವಾಗಿದೆ.

ಎಲ್ಲರಿಗೂ ತಿಳಿದಿರುವಂತೆ, ಕೆಲವು ಸಿಖ್ಖರು ಸಿಖ್ ಧರ್ಮದ ಧ್ವಜ ‘ನಿಶಾನ್ ಸಾಹೀಬ್’ಅನ್ನು ಕೆಂಪುಕೋಟೆಯಲ್ಲಿ ಹಾರಿಸಿದ್ದಾರೆ. ಆದರೆ ಇದು ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಸಲುವಾಗಿ ಬಿಜೆಪಿ ಕೈಗೊಂಡ ತಂತ್ರ ಎಂಬುದು ಶೀಘ್ರವೇ ತಿಳಿದುಬಂದಿದೆ. ಈ ಘಟನೆಯಲ್ಲಿ ಚರ್ಚೆಗೊಳಪಡುತ್ತಿರುವ ಪ್ರಮುಖ ವ್ಯಕ್ತಿ ದೀಪ್ ಸಿಧು.

ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಗಳ ವಿರುದ್ಧ ದೇಶದಾದ್ಯಂತ ಇಷ್ಟುದೊಡ್ಡ ಪ್ರತಿಭಟನೆ ನಡೆಯುತ್ತದೆ ಎಂದು ಬಿಜೆಪಿ ಊಹಿಸಿರಲಿಲ್ಲ. ಈ ಕಾನೂನುಗಳು ಕಾರ್ಪೊರೇಟ್‌ಗಳ ಪರ ಮತ್ತು ರೈತರ ವಿರೋಧಿಯಾಗಿದೆ ಎಂಬುದು ಪ್ರತಿಭಟನಾ ನಿರತ ರೈತರ ವಾದವಾಗಿದೆ. ಹಾಗಾಗಿಯೇ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ಇದರ ಭಾಗವಾಗಿ 72 ನೇ ಗಣರಾಜ್ಯೋತ್ಸವವನ್ನು ರೈತ ಗಣರಾಜ್ಯೋತ್ಸವವೆಂದು ಆಚರಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೆಹಲಿ ಪೊಲೀಸರು ನೀಡಿದ ಉದ್ದೇಶಿತ ಮಾರ್ಗದಲ್ಲಿಯೇ ಮೆರವಣಿಗೆ ನಡೆಸುವುದಾಗಿ ರೈತರು ಒಪ್ಪಿಕೊಂಡು ರ್ಯಾಲಿಯನ್ನೂ ನಡೆಸಿದರು. ಆದರೆ ರೈತರ ಒಂದು ಗುಂಪು ಮಾತ್ರ ನಿಗದಿತ ಸಮಯಕ್ಕೂ ಮೊದಲೇ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಟ್ರ್ಯಾಕ್ಟರ್ ಪೆರೇಡ್ ನಡೆಸಿತು. ಇದು ಕೊನೆಗೆ ಹಿಂಸಾತ್ಮಕ ರೂಪ ಪಡೆದು ಕೆಂಪುಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸುವಲ್ಲಿಗೆ ಕೊನೆಯಾಯಿತು. ಆದರೆ ವಿಪರ್ಯಾಸವೆಂದರೆ, ಈ ಧ್ವಜವನ್ನು (ಜಗತ್ತಿನಾಧ್ಯಂತ ಇರುವ ಪ್ರತಿಯೊಂದು ಗುರುದ್ವಾರಗಳ ಮೇಲೆ ಹಾರಿಸಲಾಗಿರುವ) ಬಿಜೆಪಿ ಪ್ರಣೀತ ಮಾಧ್ಯಮಗಳು ಖಾಲಿಸ್ತಾನ್ ಚಳುವಳಿಯ ಧ್ವಜ ಎಂದು ಬಿಂಬಿಸಿದವು.

ಟೈಮ್ಸ್‌ ನೌ ಸುದ್ದಿ ಸಂಸ್ಥೆಯು, “Farmers’ stir: Intel reports suggest ISI gave Rs 5 cr to Babbar…” (ರೈತರ ಪ್ರತಿಭಟನೆಗೆ ಐಎಸ್‌ಐ ಉಗ್ರ ಸಂಘಟನೆ 5 ಕೋಟಿ ನೀಡಿದೆ)” ಎಂದು ಸುಳ್ಳು ವರದಿಯೊಂದನ್ನು ಮಾಡಿತ್ತು. ಆದರೆ ಈ ಸುದ್ದಿಯನ್ನು ಈಗಾಗಲೇ ಡಿಲೀಟ್ ಮಾಡಿದೆ. ಇದರ ಲಿಂಕ್ ಇಲ್ಲಿದೆ. ಇದರ ಸ್ಕ್ರೀನ್‌ಶಾಟ್ ಅನ್ನು ಈ ಕೆಳಗೆ ನೀಡಲಾಗಿದೆ.

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಮೂರೂ ಬಿಟ್ಟ ಮಾಧ್ಯಮಗಳು ಮಾಡುತ್ತಿರುವ ನಾಚಿಕೆಗೇಡಿನ ಕೆಲಸಕ್ಕೆ ಇದೇ ಪುರಾವೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಮತ್ತೊಂದೆಡೆ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಮಾಧ್ಯಮಗಳು ಗುರಿಮಾಡಿಕೊಂಡಿದೆ ಎಂದು ದೆಹಲಿಯಲ್ಲಿರುವ ನಾನು ಗೌರಿ (ಕನ್ನಡ) ಮತ್ತು ಗೌರಿ ಲಂಕೇಶ್ ನ್ಯೂಸ್ (ಇಂಗ್ಲಿಷ್) ತಂಡ ವರದಿ ಮಾಡಿದೆ.

ಯಾವುದೇ ಘಟನೆಯನ್ನು ಕೋಮುವಾದೀಕರಣಗೊಳಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ನ ಭಾಗವಾಗಿರುವ ಬಿಜೆಪಿಯ ವಿಶಿಷ್ಟ ಲಕ್ಷಣವಾಗಿದೆ. ಒಬ್ಬರ ಗಮನವನ್ನು ವಾಸ್ತವ ಸಮಸ್ಯೆಯಿಂದ ಬೇರೆಡೆಗೆ ವಿಷಯಾಂತರ ಮಾಡಲು, ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುತ್ತದೆ. ಬಿಜೆಪಿಯ ಈ ಪ್ರವೃತ್ತಿಯನ್ನು ಕರ್ನಾಟಕದದ ಪರ್ಯಾಯ ಕಾನೂನು ವೇದಿಕೆ ತನ್ನ ವರದಿಯಲ್ಲಿ ದಾಖಲಿಸಿದೆ.

ಈ ವರದಿಯ ಪ್ರಕಾರ, ಕರ್ನಾಟಕದಲ್ಲಿ ಇದುವರೆಗೂ ನಡೆದಿರುವ ಹೆಚ್ಚಿನ ಕೋಮು ಗಲಭೆಗಳನ್ನು, ‘ಮಸೀದಿಯ ಆವರಣದಲ್ಲಿ ಸತ್ತ ಹಂದಿಯನ್ನು ಎಸೆಯುವುದು, ದೇವಸ್ಥಾನಗಳ ಮೇಲೆ ಪಾಕಿಸ್ತಾನದ ಹಸಿರುವ ಧ್ವಜವನ್ನು ಹಾರಿಸುವುದು’ ಮುಂತಾದ ಕುತಂತ್ರಗಳನ್ನು ಮಾಡಿ ಪ್ರಚೋದಿಸಿದೆ. ಹಾಗಾಗಿ ದೀಪ್ ಸಿಧು ಮತ್ತು ಅವನ ಗುಂಪು ಮಾಡಿರುವ ಕೃತ್ಯವು ಈ ಸಂಘಪರಿವಾರದ ಅನೈತಿಕ ತಂತ್ರದ ಭಾಗವಾಗಿದೆ. ದೆಹಲಿ ಪೊಲೀಸರು ಬಿಜೆಪಿ ಮತ್ತು ಅದರ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳ ಜೊತೆ ಶಾಮೀಲಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ.

ಕೃಪೆ: ಗೌರಿ ಲಂಕೇಶ್ ನ್ಯೂಸ್


ಇದನ್ನೂ ಓದಿ: 10 ರೈತ ನಾಯಕರ ಮೇಲೆ FIR: ಧ್ವಜ ಹಾರಿಸಿದ ದೀಪ್ ಸಿಧು ಹೆಸರು ಕೈಬಿಟ್ಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...