Homeಮುಖಪುಟರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ರೈತರನ್ನು, ಖಾಲಿಸ್ತಾನಿಗಳು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕ ಸಂಘಟನೆಗಳಿಂದ ಪ್ರಭಾವಿತವಾಗಿದ್ದಾರೆ ಎಂದು ಮುಂತಾಗಿ ಬಿಂಬಿಸುತ್ತಿವೆ. ಇದುವರೆಗೂ ಕೇವಲ ಹೀಗೆಯೇ ಬಿಂಬಿಸುತ್ತಿದ್ದ ಮುಖ್ಯವಾಹಿನಿಯ ಮಾಧ್ಯಮಗಳು ಈಗ ಮೌನ ಮುರಿದು, ತಮ್ಮ ಬಹುಮುಖ್ಯ ಚರ್ಚೆಗಳನ್ನು ರೈತರ ಪ್ರತಿಭಟನೆಯ ಮೇಲೆ ಕೇಂದ್ರೀಕರಿಸಿವೆ. ಈ ಮೂಲಕ “ರೈತ ಪ್ರತಿಭಟನೆಯು ರಾಜಕೀಯ ಪ್ರೇರಿತ ಮತ್ತು ಭಯೋತ್ಪಾದಕರ ಕೈವಾಡವಿದೆ” ಎನ್ನುತ್ತಾ ಕೂಗಾಡುತ್ತಿದ್ದಾರೆ. ಇದು ಆಶ್ಚರ್ಯಕರವಲ್ಲದಿದ್ದರೂ ಆಸಕ್ತಿದಾಯಕವಾಗಿದೆ.

ಎಲ್ಲರಿಗೂ ತಿಳಿದಿರುವಂತೆ, ಕೆಲವು ಸಿಖ್ಖರು ಸಿಖ್ ಧರ್ಮದ ಧ್ವಜ ‘ನಿಶಾನ್ ಸಾಹೀಬ್’ಅನ್ನು ಕೆಂಪುಕೋಟೆಯಲ್ಲಿ ಹಾರಿಸಿದ್ದಾರೆ. ಆದರೆ ಇದು ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಸಲುವಾಗಿ ಬಿಜೆಪಿ ಕೈಗೊಂಡ ತಂತ್ರ ಎಂಬುದು ಶೀಘ್ರವೇ ತಿಳಿದುಬಂದಿದೆ. ಈ ಘಟನೆಯಲ್ಲಿ ಚರ್ಚೆಗೊಳಪಡುತ್ತಿರುವ ಪ್ರಮುಖ ವ್ಯಕ್ತಿ ದೀಪ್ ಸಿಧು.

ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಗಳ ವಿರುದ್ಧ ದೇಶದಾದ್ಯಂತ ಇಷ್ಟುದೊಡ್ಡ ಪ್ರತಿಭಟನೆ ನಡೆಯುತ್ತದೆ ಎಂದು ಬಿಜೆಪಿ ಊಹಿಸಿರಲಿಲ್ಲ. ಈ ಕಾನೂನುಗಳು ಕಾರ್ಪೊರೇಟ್‌ಗಳ ಪರ ಮತ್ತು ರೈತರ ವಿರೋಧಿಯಾಗಿದೆ ಎಂಬುದು ಪ್ರತಿಭಟನಾ ನಿರತ ರೈತರ ವಾದವಾಗಿದೆ. ಹಾಗಾಗಿಯೇ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ಇದರ ಭಾಗವಾಗಿ 72 ನೇ ಗಣರಾಜ್ಯೋತ್ಸವವನ್ನು ರೈತ ಗಣರಾಜ್ಯೋತ್ಸವವೆಂದು ಆಚರಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೆಹಲಿ ಪೊಲೀಸರು ನೀಡಿದ ಉದ್ದೇಶಿತ ಮಾರ್ಗದಲ್ಲಿಯೇ ಮೆರವಣಿಗೆ ನಡೆಸುವುದಾಗಿ ರೈತರು ಒಪ್ಪಿಕೊಂಡು ರ್ಯಾಲಿಯನ್ನೂ ನಡೆಸಿದರು. ಆದರೆ ರೈತರ ಒಂದು ಗುಂಪು ಮಾತ್ರ ನಿಗದಿತ ಸಮಯಕ್ಕೂ ಮೊದಲೇ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಟ್ರ್ಯಾಕ್ಟರ್ ಪೆರೇಡ್ ನಡೆಸಿತು. ಇದು ಕೊನೆಗೆ ಹಿಂಸಾತ್ಮಕ ರೂಪ ಪಡೆದು ಕೆಂಪುಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸುವಲ್ಲಿಗೆ ಕೊನೆಯಾಯಿತು. ಆದರೆ ವಿಪರ್ಯಾಸವೆಂದರೆ, ಈ ಧ್ವಜವನ್ನು (ಜಗತ್ತಿನಾಧ್ಯಂತ ಇರುವ ಪ್ರತಿಯೊಂದು ಗುರುದ್ವಾರಗಳ ಮೇಲೆ ಹಾರಿಸಲಾಗಿರುವ) ಬಿಜೆಪಿ ಪ್ರಣೀತ ಮಾಧ್ಯಮಗಳು ಖಾಲಿಸ್ತಾನ್ ಚಳುವಳಿಯ ಧ್ವಜ ಎಂದು ಬಿಂಬಿಸಿದವು.

ಟೈಮ್ಸ್‌ ನೌ ಸುದ್ದಿ ಸಂಸ್ಥೆಯು, “Farmers’ stir: Intel reports suggest ISI gave Rs 5 cr to Babbar…” (ರೈತರ ಪ್ರತಿಭಟನೆಗೆ ಐಎಸ್‌ಐ ಉಗ್ರ ಸಂಘಟನೆ 5 ಕೋಟಿ ನೀಡಿದೆ)” ಎಂದು ಸುಳ್ಳು ವರದಿಯೊಂದನ್ನು ಮಾಡಿತ್ತು. ಆದರೆ ಈ ಸುದ್ದಿಯನ್ನು ಈಗಾಗಲೇ ಡಿಲೀಟ್ ಮಾಡಿದೆ. ಇದರ ಲಿಂಕ್ ಇಲ್ಲಿದೆ. ಇದರ ಸ್ಕ್ರೀನ್‌ಶಾಟ್ ಅನ್ನು ಈ ಕೆಳಗೆ ನೀಡಲಾಗಿದೆ.

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಮೂರೂ ಬಿಟ್ಟ ಮಾಧ್ಯಮಗಳು ಮಾಡುತ್ತಿರುವ ನಾಚಿಕೆಗೇಡಿನ ಕೆಲಸಕ್ಕೆ ಇದೇ ಪುರಾವೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಮತ್ತೊಂದೆಡೆ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಮಾಧ್ಯಮಗಳು ಗುರಿಮಾಡಿಕೊಂಡಿದೆ ಎಂದು ದೆಹಲಿಯಲ್ಲಿರುವ ನಾನು ಗೌರಿ (ಕನ್ನಡ) ಮತ್ತು ಗೌರಿ ಲಂಕೇಶ್ ನ್ಯೂಸ್ (ಇಂಗ್ಲಿಷ್) ತಂಡ ವರದಿ ಮಾಡಿದೆ.

ಯಾವುದೇ ಘಟನೆಯನ್ನು ಕೋಮುವಾದೀಕರಣಗೊಳಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ನ ಭಾಗವಾಗಿರುವ ಬಿಜೆಪಿಯ ವಿಶಿಷ್ಟ ಲಕ್ಷಣವಾಗಿದೆ. ಒಬ್ಬರ ಗಮನವನ್ನು ವಾಸ್ತವ ಸಮಸ್ಯೆಯಿಂದ ಬೇರೆಡೆಗೆ ವಿಷಯಾಂತರ ಮಾಡಲು, ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುತ್ತದೆ. ಬಿಜೆಪಿಯ ಈ ಪ್ರವೃತ್ತಿಯನ್ನು ಕರ್ನಾಟಕದದ ಪರ್ಯಾಯ ಕಾನೂನು ವೇದಿಕೆ ತನ್ನ ವರದಿಯಲ್ಲಿ ದಾಖಲಿಸಿದೆ.

ಈ ವರದಿಯ ಪ್ರಕಾರ, ಕರ್ನಾಟಕದಲ್ಲಿ ಇದುವರೆಗೂ ನಡೆದಿರುವ ಹೆಚ್ಚಿನ ಕೋಮು ಗಲಭೆಗಳನ್ನು, ‘ಮಸೀದಿಯ ಆವರಣದಲ್ಲಿ ಸತ್ತ ಹಂದಿಯನ್ನು ಎಸೆಯುವುದು, ದೇವಸ್ಥಾನಗಳ ಮೇಲೆ ಪಾಕಿಸ್ತಾನದ ಹಸಿರುವ ಧ್ವಜವನ್ನು ಹಾರಿಸುವುದು’ ಮುಂತಾದ ಕುತಂತ್ರಗಳನ್ನು ಮಾಡಿ ಪ್ರಚೋದಿಸಿದೆ. ಹಾಗಾಗಿ ದೀಪ್ ಸಿಧು ಮತ್ತು ಅವನ ಗುಂಪು ಮಾಡಿರುವ ಕೃತ್ಯವು ಈ ಸಂಘಪರಿವಾರದ ಅನೈತಿಕ ತಂತ್ರದ ಭಾಗವಾಗಿದೆ. ದೆಹಲಿ ಪೊಲೀಸರು ಬಿಜೆಪಿ ಮತ್ತು ಅದರ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳ ಜೊತೆ ಶಾಮೀಲಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ.

ಕೃಪೆ: ಗೌರಿ ಲಂಕೇಶ್ ನ್ಯೂಸ್


ಇದನ್ನೂ ಓದಿ: 10 ರೈತ ನಾಯಕರ ಮೇಲೆ FIR: ಧ್ವಜ ಹಾರಿಸಿದ ದೀಪ್ ಸಿಧು ಹೆಸರು ಕೈಬಿಟ್ಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...