Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...