Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...