Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...