Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...