Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...