Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...