Homeಮುಖಪುಟಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ಅಮೆರಿಕದಂತೆ ಇಲ್ಲಿಯೂ ಸಾಮಾಜಿಕ ಜಾಲತಾಣಗಳು ಕಾರ್ಯನಿರ್ವಹಿಸಿದ್ದರೆ, ಇಷ್ಟೊತ್ತಿಗಾಗಲೇ ಅಮಿತ್ ಮಾಳವಿಯ, ಕಪಿಲ್ ಮಿಶ್ರಾ, ತೇಜಸ್ವಿ ಸೂರ್ಯ ಇತ್ಯಾದಿ ವಿಭಜನಾಕಾರಿ ಸಂದೇಶ ವಾಹಕರ ಖಾತೆಗಳು ಎಂದೋ ಮಣ್ಣುಪಾಲು ಆಗಬೇಕಿತ್ತು. ಆದರೆ, ಅದೇಕೆ ಆಗಲಿಲ್ಲ?

- Advertisement -
- Advertisement -

ಫೇಸ್‌ಬುಕ್, ಟ್ವೀಟರ್‌ಗಳೇನೂ ಸಂಪೂರ್ಣ ಪ್ರಜಾಪ್ರಭುತ್ವವಾದಿಯಲ್ಲ ಎಂಬುದು ಭಾರತದಲ್ಲಿ ದೃಢಪಟ್ಟಿದೆ. ಆದರೆ ಅಮೆರಿಕದಲ್ಲಿ ಅವಕ್ಕೆ ಹೆಚ್ಚಿನ ಸ್ವಾತಂತ್ರ್ಯ ಇರುವ ಕಾರಣಕ್ಕೆ ಟ್ವೀಟರ್ ಖಾಯಂ ಆಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಲು ಸಾಧ್ಯವಾಗಿದೆಯಷ್ಟೇ.
ಇದೊಳ್ಳೆ ಕತೆ. ಬಿಜೆಪಿಯ ಹಲವರು ಈಗ ಅಭಿವ್ಯಕ್ತಿ ಸ್ವಾತಂತ್ರ್ಯ, ಫ್ರೀ ಸ್ಪೀಚ್ ಮತ್ತು ಡೆಮಾಕ್ರಸಿ-ಇತ್ಯಾದಿ ಪದಪುಂಜಗಳನ್ನು ಬಳಸುತ್ತಿದಾರಷ್ಟೇ. ಶುಕ್ರವಾರ ಟ್ರಂಪ್ ಸಾಹೇಬರ ಟ್ವೀಟರ್ ಖಾತೆಯನ್ನು ಖಾಯಂ ಆಗಿ ಸ್ಥಗಿತಗೊಳಿಸಿದ ನಂತರ ಅವರು ನೀಡುತ್ತಿರುವ ಪ್ರತಿಕ್ರಿಯೆಗಳು ಅವರ ಆಷಾಢಭೂತಿತನಕ್ಕೆ ಸಾಕ್ಷಿಯಾಗಿವೆ.

ಟ್ವೀಟರ್ ಖಾತೆ ಸ್ಥಗಿತಗೊಳಿಸಲು ಕಾರಣವಾದ, ಕ್ಯಾಪಿಟಲ್ ಮೇಲೆ ದಾಳಿಯಾಗುವಂತೆ ಟ್ರಂಪ್ ಪ್ರಚೋದನಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರ ಬಗ್ಗೆ ಬಿಜೆಪಿಯ ಈ ಧ್ವನಿಗಳು ಪ್ರಸ್ತಾಪಿಸುತ್ತಿಲ್ಲ. ಅಥವಾ ಟ್ವೀಟರ್ ಖಾತೆಯೊಂದರ ರದ್ದು ಅದ್ಹೇಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂಬುದನ್ನೂ ಹೇಳುತ್ತಿಲ್ಲ.

ಈ ಧ್ವನಿಗಳ ಒಟ್ಟೂ ಸಾರಾಂಶ: ಅಮೆರಿಕದ ಅಧ್ಯಕ್ಷರ ಟ್ವೀಟರ್ ಖಾತೆಯನ್ನೇ ರದ್ದು ಮಾಡಲಾಗಿದ್ದು, ತಮ್ಮ ಖಾತೆಗಳಿಗೂ ಈ ಅಪಾಯ ಒದಗಬಹುದೆಂಬ ಆತಂಕವಷ್ಟೇ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ಸಾಮಾಜಿಕ ಜಾಲತಾಣಗಳ ನಿಯಮ ಮತ್ತು ಷರತ್ತುಗಳು ಅಮೆರಿಕ ಮತ್ತು ಭಾರತದಲ್ಲಿ ಒಂದೇ ಆಗಿಲ್ಲ. ಅಲ್ಲಿ ಅವಕ್ಕೆ ಇಲ್ಲಿಗಿಂತ ಹೆಚ್ಚಿನ ಸ್ವಾತಂತ್ರ್ಯವಿದ್ದ ಕಾರಣಕ್ಕೆ ಈ ಹಿಂದೆಯೂ ಅವು ಟ್ರಂಪ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತ ಬಂದಿದ್ದವು.
ಭಾರತದಲ್ಲಿ ಆ ನಿಯಮಗಳು ಕಠಿಣವಾಗಿಲ್ಲ ಮತ್ತು ಆಡಳಿತರೂಢ ಬಿಜೆಪಿ 8-10 ವರ್ಷಗಳಿಂದ ಜಾಲತಾಣಗಳ ಜೊತೆ ’ಗುಪ್ತ’ ಮೈತ್ರಿ ಮಾಡಿಕೊಂಡೇ ಬಂದಿರುವುದನ್ನು ಫೇಸ್‌ಬುಕ್ ತಾರತಮ್ಯದ ಪ್ರಕರಣ ತೋರಿಸುತ್ತದೆ.

ಅಮೆರಿಕದಂತೆ ಇಲ್ಲಿಯೂ ಸಾಮಾಜಿಕ ಜಾಲತಾಣಗಳು ಕಾರ್ಯನಿರ್ವಹಿಸಿದ್ದರೆ, ಇಷ್ಟೊತ್ತಿಗಾಗಲೇ ಅಮಿತ್ ಮಾಳವಿಯ, ಕಪಿಲ್ ಮಿಶ್ರಾ, ತೇಜಸ್ವಿ ಸೂರ್ಯ ಇತ್ಯಾದಿ ವಿಭಜನಾಕಾರಿ ಸಂದೇಶ ವಾಹಕರ ಖಾತೆಗಳು ಎಂದೋ ಮಣ್ಣುಪಾಲು ಆಗಬೇಕಿತ್ತು. ಆದರೆ, ಅದೇಕೆ ಆಗಲಿಲ್ಲ?

ಕೋಮುವಾದಿ ಪ್ರಚೋದನ್ಮಾತಕ ಹೇಳಿಕೆ/ಸಂದೇಶಗಳಿಗೆ ಕುಖ್ಯಾತಿ ಪಡೆದಿರುವ ಬೆಂಗಳೂರು ದಕ್ಷಿಣದ ಸಂಸದ ಮತ್ತು ರಾಷ್ಟ್ರೀಯ ಬಿಜೆಪಿ ಯುವ ಘಟಕದ ಮುಖ್ಯಸ್ಥ ತೇಜಸ್ವಿ ಸೂರ್ಯ, ಟ್ರಂಪ್ ಪರ ಟ್ವೀಟ್ ಮಾಡಿ, ಅವರ ಖಾತೆ ರದ್ದುಗೊಳಿಸಿದ್ದನ್ನು ಪ್ರಜಾಪ್ರಭುತ್ವ ದೇಶಗಳ ನಾಯಕರಿಗೆ ಕಾದಿರುವ ಅಪಾಯ ಎಂದು ’ಬಿಗ್ ಟೆಕ್’ ಕಂಪನಿಗಳ ವಿರುದ್ಧ ಹರಿಹಾಯ್ದಿದ್ದು ಈ ಉಂಡಾಂಡಿಗುಂಡ ಹುಡುಗನ ಆಷಾಢಭೂತಿತನವನ್ನು ತೋರಿಸುತ್ತದೆ.

ಇದನ್ನೂ ಓದಿ: ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

ಈತನ ಹಿಂದೆಯೇ, ಬಿಜೆಪಿಯ ದುಷ್ಟ ಟ್ರಾಲ್ ಸೇನೆಯ ಹಿಂದಿನ ಬ್ರೇನ್ ಎಂದೇ ಕುಖ್ಯಾತನಾಗಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಟ್ರಂಪ್ ಪರ ಬ್ಯಾಟಿಂಗ್ ಮಾಡಿದ್ದಾರೆ.

’ಈ ಅನಿಯಂತ್ರಿತ ದೈತ್ಯ ಟೆಕ್ ಕಂಪನಿಗಳಿಂದ ಪ್ರಜಾಪ್ರಭುತ್ವಗಳಿಗೆ ಇರುವ ಅಪಾಯವನ್ನು ಎಲ್ಲರೂ ಅರಿಯಬೇಕಿದೆ’ ಎಂದು ಪುಟಾಣಿ ತೇಜಸ್ವಿ ಸೂರ್ಯ ಡೆಮಾಕ್ರಸಿಯ ಪರ ಟ್ವೀಟ್ ಮಾಡಿದೆ!

’ಅವರು POTUS (President Of the United States) ಗೇ ಈ ರೀತಿ ಮಾಡುತ್ತಾರೆಂದರೆ, ಅವರು ಇದನ್ನು ಯಾರ ಮೇಲಾದರೂ ಪ್ರಯೋಗಿಸಬಹುದು’ ಎಂಬ ತೇಜಸ್ವಿ ಸೂರ್ಯರ ವಾಕ್ಯದಲ್ಲಿ ಸುಪ್ತವಾಗಿ ಟ್ರಂಪ್ ಆರಾಧನೆಯಿದೆ. ಅದಕ್ಕಿಂತ ಹೆಚ್ಚಾಗಿ, ’ಅಮೆರಿಕ ಅಧ್ಯಕ್ಷರಿಗೇ’ ಎಂಬುದರಲ್ಲಂತೂ ಆರಾಧನೆಯ ಭಾವವಿದೆ. ಆದರೆ ಈ ಹಿಂದೆಯೂ ಟ್ರಂಪ್ ತಮ್ಮ ಹುಚ್ಚು ಸಂದೇಶಗಳ ಕಾರಣಕ್ಕೆ ಫೇಸ್‌ಬುಕ್, ಟ್ವೀಟರ್‌ಗಳಿಂದ ತಾತ್ಕಾಲಿಕ ಖಾತೆ ನಿರ್ಬಂಧವನ್ನು ಎದುರಿಸಿದ್ದಾರೆ ಎಂಬುದನ್ನು ಈ ಪ್ರಖರ ಕೋಮುವಾದಿ ಸಂಸದ ಮರೆತಂತಿದೆ.

ಇದನ್ನೂ ಓದಿ: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಅರಬ್ ಮಹಿಳೆಯರ ಕುರಿತಾದ ಟ್ವೀಟ್‌ಗೆ ಅರಬ್ ಆಡಳಿತದಿಂದ ತೀವ್ರ ಆಕ್ಷೇಪ ವ್ಯಕ್ತವಾದ ನಂತರ ತೇಜಸ್ವಿ ಸೂರ್ಯ ಆ ಟ್ವೀಟ್ ಡಿಲೀಟ್ ಮಾಡಿದ್ದರು. ಬಹುಷ: ಆಗಲೇ ಈತನ ಖಾತೆ ರದ್ದಾಗುವ ಸಂಭವವಿತ್ತೇನೊ? ಹೈದರಾಬಾದ್ ಸ್ಥಳೀಯ ಸಂಸ್ಥೆ ಚುನಾವಣೆ ಸಂದರ್ಭದಲ್ಲೂ ಒವೈಸಿ ಕುರಿತು ತೇಜಸ್ವಿ ನೀಡಿದ ಹೇಳಿಕೆ ಕೋಮು ಪ್ರಚೋದನಾಕಾರಿಯಾಗಿದೆ ಎಂದು ಅಲ್ಲಿನ ಪೊಲೀಸರು ಎಚ್ಚರಿಸಿದ್ದರು.

ಜೀವವಿರೋಧಿ ಸಿದ್ದಾಂತವನ್ನೆ ಮೈ-ಮನಸ್ಸುಗಳ ತುಂಬ ಹರಡಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ’ಅಮೆರಿಕದ ಅಧ್ಯಕ್ಷರನ್ನೇ ಒಂದು ವೇದಿಕೆಯಿಂದ ನಿರಾಕರಿಸುವುದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ’ ಎಂದು ಟ್ವೀಟ್ ಮಾಡಿದ್ದಾರೆ!

ಟ್ವೀಟರ್ ಕಂಪನಿಯ ಕ್ರಮವನ್ನು ಫ್ರೀ ಸ್ಪೀಚ್ ವಿರುದ್ಧದ ಕ್ರಮ ಎಂಬಂತೆ ಬಿಂಬಿಸಲು ಯತ್ನಿಸಿರುವ ಮಾಳವಿಯ, ಈ ಸಂದರ್ಭವನ್ನು ಬಿಜೆಪಿಯ ಸಿದ್ದಾಂತ ವಿರೋಧಿಸುವವರನ್ನು ಟಾರ್ಗೆಟ್ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಆಮ್ ಆದ್ಮಿ ದೆಹಲಿ ಘಟಕದ ಸಾಮಾಜಿಕ ಜಾಲತಾಣದ ಉಸ್ತುವಾರಿ ಅಂಕಿತ್ ಲಾಲ್ ಇದಕ್ಕೆ ಪ್ರತಿಕ್ರಿಯಿಸಿದ್ದು, ’ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ವತ: ಸುಳ್ ಸುದ್ದಿ ಹರಡುವ, ತಪ್ಪು ಮಾಹಿತಿ ಪ್ರಸರಿಸುವ, ಆ ಮೂಲಕ ಪರೋಕ್ಷವಾಗಿ ಹಿಂಸೆಯನ್ನು ಪ್ರಚೋದಿಸುವ ವ್ಯಕ್ತಿ ಇಂದು ಬಿಗ್ ಟೆಕ್ ಕಂಪನಿಗಳ ವಿರುದ್ಧ ಮಾತಾಡುತ್ತಿದ್ದಾರೆ. ಮಾಳವಿಯ ಅವರೆ, ಇಲ್ಲಿವರೆಗೂ ನಿಮ್ಮ ಅಕೌಂಟ್ ರದ್ದಾಗದೇ ಇರಲು ಕಾರಣ, ಫೇಸ್‌ಬುಕ್ ಮತ್ತು ಟ್ವೀಟರ್‌ಗಳು ಭಾರತ ಮತ್ತು ಅಮೆರಿಕಗಳಿಗೆ ಒಂದೇ ನಿಯಮಗಳನ್ನು ಅನ್ವಯಿಸದಿರುವುದೇ ಆಗಿದೆ’ ಎಂದಿದ್ದಾರೆ.

ಈ ಸೂರ್ಯ, ಮಾಳವಿಯಾಗಳು ಇದೇ ’ಬಿಗ್ ಟೆಕ್’ ಕಂಪನಿಗಳ ವೇದಿಕೆ ಬಳಸಿಕೊಂಡು, ಕೋಮು ಪ್ರಚೋದನಾತ್ಮಕ, ಹಿಂಸೆ ಪ್ರಚೋದನ್ಮಾತಕ ಸಂದೇಶಗಳನ್ನು ಹರಿಬಿಡುತ್ತ ಬಂದಿದ್ದಾರೆ. ಆದರೆ ಇಲ್ಲಿ ಕಠಿಣ ನಿಯಮ ಇಲ್ಲದ್ದರಿಂದ ಮತ್ತು ಈ ’ಬಿಗ್ ಟೆಕ್’ ಕಂಪನಿಗಳ ಆಯಕಟ್ಟಿನ ಸ್ಥಳಗಳಲ್ಲಿ ಹಿಂದೂತ್ವಾದಿಗಳೇ ತುಂಬಿದ ಕಾರಣಕ್ಕೆ ಇವರೆಲ್ಲರೂ ಅಕೌಂಟ್ ರದ್ದತಿಯಿಂದ ವಿನಾಯ್ತಿ ಪಡೆದಿದ್ದಾರೆ. ವಾಲ್‌ಸ್ಟ್ರೀಟ್ ಪ್ರಕಟಿಸಿದ್ದ ಫೇಸ್‌ಬುಕ್ ಪಕ್ಷಪಾತ ಕುರಿತಾದ ತನಿಖಾ ವರದಿ ಇದನ್ನೇ ಸೂಚಿಸುತ್ತದೆ.

ಟ್ರಂಪ್ ಖಾತೆ ರದ್ದಾದಾಗ ಹಲವಾರು ಟ್ವೀಟರಿಗರು ದೆಹಲಿ ಬಿಜೆಪಿ ಕಪಿಲ್ ಮಿಶ್ರಾ ಖಾತೆಯನ್ನೂ ರದ್ದು ಮಾಡಿ ಎಂದು ಒತ್ತಾಯಿಸಿದ್ದರು.
ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ಸಂದೇಶ ಮತ್ತು ದೆಹಲಿ ಅಸೆಂಬ್ಲಿ ಚುನಾವಣೆಯನ್ನು ’ಇಂಡಿಯಾ ವರ್ಸಸ್ ಪಾಕಿಸ್ತಾನ್’ ಮ್ಯಾಚ್ ಎಂದು ಕೋಮುವಾದಿ ಸಂದೇಶ ಹಾಕಿದ್ದ ಕಪಿಲ್ ಮಿಶ್ರಾ ಮೇಲೆ ಈ ’ಬಿಗ್ ಟೆಕ್’ ಕಂಪನಿಗಳು ಕ್ರಮ ಕೈಗೊಳ್ಳಲು ಏನು ಅಡ್ಡಿಯಾಗಿದೆ ಎಂಬುದನ್ನು ಟ್ರಂಪ್ ಬೆಂಬಲಿಗ ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಲು ಸಿದ್ಧರಿಲ್ಲ.


ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...